ಉಪ್ಪು ತಿಂದವರು ನೀರು ಕುಡಿಯಲೇಬೇಕು: ಭಿನ್ನರ ರಾಗ

ಏನ್ ಸಾರು ಯಡಿಯೂರಪ್ಪ ಅವರಿಗೆ ಹೀಗೆ ಆಗಿದೆ ಏನ್ ಹೇಳ್ತೀರಾ? ಅಂದ್ರೆ..'ಉಪ್ಪು ತಿಂದವರು ನೀರು ಕುಡಿಯಲೇಬೇಕು', ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ವರದಿ ಬಂದ ನಂತರ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಾಗುತ್ತದೆ. ಕಷ್ಟದಲ್ಲಿ ಕುಸಿಯುತ್ತಿದ್ದಾಗ ಕೈ ಹಿಡಿದು ಮೇಲಕ್ಕೆತ್ತಿದವರನ್ನೇ ಕೆಳಕ್ಕೆ ದೂಡುವ ಜಯಮಾನ ಯಡಿಯೂರಪ್ಪನವರದು ಎಂದು ಮಾಜಿ ಸಚಿವ ಹಾಗೂ ಪಾವಗಡ ಶಾಸಕ ವೆಂಕಟರಮಣಪ್ಪ ಅಭಿಪ್ರಾಯಪಟ್ಟಿದ್ದಾರೆ.
ಆದರೆ ಕಳೆದ ಎರಡೂವರೆ ವರ್ಷಗಳಿಂದ ಯಡಿಯೂರಪ್ಪ ಅವರು ಹತ್ತಿರದಿಂದ ಗಮನಿಸಿದ್ದೇನೆ. ಯಡಿಯೂರಪ್ಪ ರಾಜೀನಾಮೆ ನೀಡುವುದು ಅನುಮಾನ. ಬಿಜೆಪಿಯಲ್ಲಿ ಹೈಕಮಾಂಡ್, ಲೋ ಕಮಾಂಡ್ ಎಲ್ಲವೂ ಯಡಿಯೂರಪ್ಪನವರೇ ಆಗಿದ್ದಾರೆ. ದೆಹಲಿ ಹೈ ಕಮಾಂಡ್ ಎನ್ನುವುದು ನಾಮಕಾವಸ್ಥೆಗೆ ಅಷ್ಟೇ ಎಂದು ವೆಂಕಟರಮಣಪ್ಪ ಹೇಳಿದರು.
ಶಿವಮೊಗ್ಗ, ಸಾಗರ ಕಡೆ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಬಯಸಿ ಭಿನ್ನರ ಗುಂಪು ಸೇರಿದ್ದ ಬೇಳೂರು ಗೋಪಾಲಕೃಷ್ಣ ಈಗ ಬೆಕ್ಕಿನ ಮರಿಯಂತೆ ಯಡಿಯೂರಪ್ಪ ಅವರ ಹಿಂದೆ ಬಂದು ಕೈ ಕಟ್ಟಿ ನಿಂತಿದ್ದಾರೆ. ಇನ್ನು ಪಕ್ಷೇತರರಲ್ಲಿ ಸಕತ್ ಟ್ಯಾಲೆಂಟೆಡ್ ವರ್ತೂರು ಪ್ರಕಾಶ್ ಭಿನ್ನತನದ ನಾಟಕ ಆರಂಭಕ್ಕೆ ಮುನ್ನವೇ ಪಕ್ಷ ಬದಲಾಯಿಸಿದ್ದಾರೆ. ಚಿತ್ರದುರ್ಗ, ಹಿರಿಯೂರು ಕಡೆಯ ಗೂಳಿಹಟ್ಟಿ ಶೇಖರ್, ಡಿ ಸುಧಾಕರ್ ಎಲ್ಲೂ ಬಟ್ಟೆ ಹರಿದುಕೊಂಡಿದ್ದು, ಗೊಟರು ಹಾಕಿದ್ದು ನಮ್ಮ ಪ್ರತಿನಿಧಿ ಕಿವಿಗೆ ಬಿದ್ದಿಲ್ಲ.
ಬಯಲಾಟದ ಎಕ್ಸ್ ಪರ್ಟ್ ಶಂಕರಲಿಂಗೇಗೌಡರು ಕುಟುಂಬ ಕಲಹಕ್ಕೆ ಭಿನ್ನಮತ ಲೇಪ ಬಳಿದು ಹಾದಿ ಬೀದಿಯಲ್ಲಿ ಕುಣಿದಿದ್ದಷ್ಟೇ ಬಂತು. ಮತ್ತೆ ಯಡಿಯೂರಪ್ಪ ಪಾಳೆಯದಲ್ಲಿ ಅವರ ನೆರಳು ಸಹ ಸೋಕಲು ಸಾಧ್ಯವಿಲ್ಲ. ರೇಣುಕಾಚಾರ್ಯ ಆರು ಕೊಟ್ಟ ಸಿಎಂ ಪರ ನಿಂತು ಮೂರು ಕೊಟ್ಟ ವಿರೋಧಿಗಳ ಗುಂಪಿಗೆ ಸಡ್ಡು ಹೊಡೆದಿದ್ದಾರೆ. ಕೋತಿ ತಾನು ತಿಂದು ಮೇಕೆ ಮೂತಿಗೆ ಬಳಿದಂತೆ ಬಂಡಾಯ ನಾಟಕವನ್ನು ಯಶಸ್ವಿಯಾಗಿ ಆಡಿ, ಅನ್ಯಥಾ ಶರಣಂ ನಾಸ್ತಿ ಎಂದು ಯಡಿಯೂರಪ್ಪ ಅವರ ಕಾಲು ಹಿಡಿದಿದ್ದಾರೆ.
ಅಂತಿಮವಾಗಿ ಯಡಿಯೂರಪ್ಪ ಅವರಿಗೆ ಆಂತರಿಕವಾಗಿ ಬೆಂಬಲವಿಲ್ಲ ಎಂಬ ಮಾತು ಒಂದರ್ಥದಲ್ಲಿ ನಿಜವಾದರೂ ಯಾರು ಯಡಿಯೂರಪ್ಪ ಅವರನ್ನು ಎದುರಿಸಿ ನಿಲ್ಲುವ ಧೈರ್ಯ ಮಾಡುವುದಿಲ್ಲ. ಯಡಿಯೂರಪ್ಪ ಮತ್ತೊಮ್ಮೆ ತಮ್ಮ ತಂತ್ರಗಾರಿಕೆಯಿಂದ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸುವುದನ್ನು ನಾಡಿನ ಜನತೆ ಕುತೂಹಲದಿಂದ ನೋಡುವ ಕ್ಷಣ ಇನ್ನೇನೂ ಹತ್ತಿರದಲ್ಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications