ಆಂಧ್ರದಲ್ಲಿ 50 ಸಾವಿರ ಕೋಟಿ ನಷ್ಟ, ಲೋಕಾಯುಕ್ತರೇ ಕಾಪಾಡಿ

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆಯಿಂದ ಸುಮಾರು 16,085 ಕೋಟಿ ರು ನಷ್ಟವಾಗಿದೆ ಎಂದು ವರದಿ ಹೇಳುತ್ತದೆ. ಆದರೆ, ಆಂಧ್ರ ಪ್ರದೇಶದಲ್ಲಿ ಕಳೆದ ಏಳು ವರ್ಷಗಳಲ್ಲಿ ಗಣಿಗಾರಿಕೆಯಿಂದ ಆಗಿರುವ ನಷ್ಟದ ಮೊತ್ತ 50,000 ಕೋಟಿ ಮೀರುತ್ತದೆ. ಬಳ್ಳಾರಿ ರೆಡ್ಡಿ ಸೋದರರು ಹಾಗೂ ವೈಎಸ್ ರಾಜಶೇಖರ ರೆಡ್ಡಿ ಕುಟುಂಬ ಒಎಂಸಿ ಕಂಪನಿ ಗಣಿಗಾರಿಕೆ ಮೂಲಕ ಗಡಿಭಾಗವನ್ನು ಲೂಟಿ ಮಾಡಿದ್ದಾರೆ.
ಈ ಕೂಡಲೇ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಸೇರಿದಂತೆ, ಜಗನ್ ಮೋಹನ್ ರೆಡ್ಡಿ ಆಸ್ತಿ ತನಿಖೆಯಾಗಬೇಕು. ಇದಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಲೋಕಾಯುಕ್ತರನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಟಿಡಿಪಿ ಹಿರಿಯ ನಾಯಕ ಯರ್ರಂ ನಾಯ್ಡು ಆಗ್ರಹಿಸಿದ್ದಾರೆ.
ಗಣಿ ವರದಿ ಸ್ಫೋಟಕ್ಕೆ ಬೆಚ್ಚಿದ ಜಗನ್: ಆಸ್ತಿ ಪಾಸ್ತಿ ವಿವರದ ಹಿಂದೆ ಸಿಬಿಐ ಬೆನ್ನು ಹತ್ತಿರುವ ಸಂದರ್ಭದಲ್ಲಿ, ರೆಡ್ಡಿ ಸೋದರರು ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವುದು ಜಗನ್ ಗೆ ಹಿನ್ನೆಡೆಯಾಗಿದೆ.
ತನ್ನ ತಂದೆ ಕಾಲದಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಕುಟುಂಬದ ಜೊತೆ ಇದ್ದ ಆತ್ಮೀಯತೆ ಹಾಗೂ ವ್ಯವಹಾರ ಈಗ ಅಷ್ಟಾಗಿ ಇಲ್ಲವಾದರೂ ಹಳೆ ಕೊಂಡಿಯನ್ನು ಹಿಡಿದು ಜಗ್ಗಿದರೆ ಇಲ್ಲಿವರೆವಿಗೂ ಕಟ್ಟಿರುವ ಕನಸಿನ ಸೌಧ ಕುಸಿಯುವ ಭೀತಿಯಲ್ಲಿ ಜಗನ್ ಇದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications