ಯಡ್ಡಿ ಹೊಸ ಪಕ್ಷ ಸ್ಥಾಪನೆ, ಗಾಳಿಸುದ್ದಿಗೆ ಮತ್ತೆ ಜೀವ

ರಾಜೀನಾಮೆ ನೀಡದೆ ವಿಧಾನಸಭೆ ವಿಸರ್ಜಿಸುವ ಯಡಿಯೂರಪ್ಪ ಅವರ ಪ್ರಯತ್ನಕ್ಕೆ ಹೈಕಮಾಂಡ್ ಅಡ್ಡಗಾಲು ಹಾಕಿದೆ. ಈ ಮಧ್ಯೆ ಕಳೆದ ಮಾರ್ಚ್ ತಿಂಗಳಿಂದ ಹರಿದಾಡುತ್ತಿದ್ದ ಗಾಳಿಸುದ್ದಿ ಆಷಾಢದ ಗಾಳಿ ಸೋಕಿ ಕೊನೆ ಗಳಿಗೆಯಲ್ಲಿ ಮತ್ತೆ ಜೀವ ಸಿಕ್ಕಿದೆ.
ಆದರೆ, ಈ ಬಾರಿ ಉದ್ಯಮಿ ಅಶೋಕ್ ಖೇಣಿ ಬದಲಿಗೆ ಬಂಡವಾಳ ಹೂಡಿಕೆಯ ಜವಾಬ್ದಾರಿಯನ್ನು ರೆಡ್ಡಿ ಸೋದರರು ವಹಿಸುವ ಸಾಧ್ಯತೆಯಿದೆ. ಪಕ್ಷದ ಹೆಸರು ಕರ್ನಾಟಕ ಮಕ್ಕಳ ಪಕ್ಷ ಅಥವಾ ಕನ್ನಡ ಮಕ್ಕಳ ಪಕ್ಷ ಎಂದಾಗಲಿದೆ. ಹೊಸ ಪ್ರಾದೇಶಿಕ ಪಕ್ಷದ ನೋಂದಾವಣೆ ಕಾರ್ಯದ ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಆದರೆ, ಹೊಸ ಪಕ್ಷ ಸ್ಥಾಪನೆ, ಯಡಿಯೂರಪ್ಪ ಅವರ ಕೊನೆ ಆಯ್ಕೆ ಎನ್ನಲಾಗಿದೆ. ತಮ್ಮ ಷರತ್ತುಗಳಿಗೆ ಹೈಕಮಾಂಡ್ ಒಪ್ಪಿದರೆ ಪಕ್ಷ ಕಟ್ಟುವ ಯೋಚನೆಯನ್ನು ಕೈಬಿಡುವ ಸಾಧ್ಯತೆಯಿದೆ. ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 50 ಸೀಟು ಗೆಲ್ಲುವುದು ಯಡಿಯೂರಪ್ಪ ಅವರ ಗುರಿ.
ಒಂದು ವೇಳೆ ಯಡಿಯೂರಪ್ಪ ಅವರು ಬಿಜೆಪಿ ಒಡೆದರೆ, ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗುತ್ತದೆ. ಪ್ರಭಾವಿ ಲಿಂಗಾಯತ ನಾಯಕ ಯಡಿಯೂರಪ್ಪ ಅವರು ಹೊಸ ಪತ್ರಿಕೆ, ಟಿವಿ ವಾಹಿನಿ ಅಥವಾ ಪಕ್ಷ ಕಟ್ಟಿದರೂ ಬಿಜೆಪಿಗೆ ಪೂರಕವಾಗೇ ಇರುವಂತೆ ನೋಡಿಕೊಳ್ಳಲು ಹೈಕಮಾಂಡ್ ಶತ ಪ್ರಯತ್ನ ನಡೆಸಿದೆ ಎಂಬ ಸುದ್ದಿಯಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications