ಮುಖ್ಯ ನ್ಯಾಯಮೂರ್ತಿ ದಿನಕರನ್ ಕೊನೆಗೂ ರಾಜೀನಾಮೆ
ಇದೇ ವೇಳೆ ಯಡಿಯೂರಪ್ಪ ಅವರ ರಾಜೀನಾಮೆ ಬಹುತೇಕ ಖಚಿತವಾಗಿದ್ದು, ವರಿಷ್ಠರ ಕರೆಯ ಮೇರೆಗೆ ಹೋಟೆಲ್ ಅಶೋಕಕ್ಕೆ ಧಾವಿಸಿರುವ ಯಡಿಯೂರಪ್ಪ ರಾಜೀನಾಮೆ ನಿರ್ಧಾರವನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಿಸುವ ಲಕ್ಷಣಗಳು ಗೋಚರಿಸುತ್ತಿವೆ.
ಭ್ರಷ್ಟಾಚಾರ ಆರೋಪದ ಮೇಲೆ ವಾಗ್ದಂಡನೆ ಎದುರಿಸುತ್ತಿರುವ ಸಿಕ್ಕಿಂ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ದಿನಕರನ್ (61) ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಮುಂದಿನ ವರ್ಷ ಮೇ 5ರಂದು ಅವರು ನಿವೃತ್ತಿಯಾಗಬೇಕಿತ್ತು.
ಭೂ ಕಬಳಿಕೆ ಮತ್ತು ಆದಾಯಕ್ಕೆ ಮೀರಿದ ಆಸ್ತಿ ಸಂಪಾದನೆ ಆರೋಪದ ಬಗ್ಗೆ ತನಿಖೆ ನಡೆಸಲು ರಾಜ್ಯಸಭೆಯ ಸಭಾಪತಿ ನೇಮಿಸಿದ್ದ ಮೂವರು ಸದಸ್ಯರ ತನಿಖಾ ಸಮಿತಿಯು ವಿಚಾರಣೆ ನಡೆಸುವ ಮೊದಲೇ ಅವರು ರಾಜೀನಾಮೆ ನೀಡಿದ್ದಾರೆ.
ಒಟ್ಟಾರೆ ಈಗ ಏನು ನಡೆಯುತ್ತಿದೆ ಆ ಬಗ್ಗೆ ಅವರಿಗೆ ಸಮಾಧಾನ ಇರಲಿಲ್ಲ. ಅಧಿಕಾರ ಸ್ಥಾನದಲ್ಲಿ ಮುಂದುವರಿದರೆ ನ್ಯಾಯಾಂಗಕ್ಕೆ ತೊಂದರೆಯಾಗುತ್ತದೆ ಎಂದು ಅವರು ಭಾವಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಸಮಿತಿಯ ವಿಚಾರಣೆ ತಡೆಗೆ ಅವರು ನಡೆಸಿದ ಅನೇಕ ಯತ್ನಗಳು ಸಫಲವಾಗಲಿಲ್ಲ, ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದೆಂಬ ಬಗ್ಗೆ ಅವರಿಗೆ ನಂಬಿಕೆ ಇರಲಿಲ್ಲ. ಅವರ ರಾಜೀನಾಮೆಗೆ ಇದೂ ಒಂದು ಕಾರಣ ಎಂದು ಹೇಳಿವೆ