ಗಣಿ ಲೂಟಿ 1: ಕುಮಾರಸ್ವಾಮಿ ಕಾಲದಲ್ಲೇ ಹೆಚ್ಚು ದೋಚಿದ್ದು

HD Kumaraswamy
ಬೆಂಗಳೂರು, ಆಗಸ್ಟ್. 01: ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಅವರ ಸೇವಾವಧಿ ಆಗಸ್ಟ್ 2ಕ್ಕೆ ಮುಕ್ತಾಯವಾಗಲಿದ್ದು, ನಾಳೆ ಅವರು ನಿವೃತ್ತಿಯಾಗಲಿದ್ದಾರೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನೂ ಸೇವಾಧಿಯಿದ್ದರೂ ನಿನ್ನೆಯೇ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ, ನಾನಾ ಆಡಳಿತ ಕಾಲದಲ್ಲಿ ರಾಜ್ಯದಲ್ಲಿ ನಡೆದ ಗಣಿ ದರೋಡೆಯ ಪ್ರಮಾಣ ಎಷ್ಟು ಎಂಬುದನ್ನು ಇಲ್ಲಿ ನೀಡಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 11 ಸಾವಿರ ಕೋಟಿ ರೂ. ನಷ್ಟವುಂಟಾಗಿದೆ. ಈ ಅವಧಿಯಲ್ಲಿ 65 ಲಕ್ಷ ಮೆಟ್ರಿಕ್‌ ಟನ್‌ ಅದಿರು ಅಕ್ರಮವಾಗಿ ವಿದೇಶಕ್ಕೆ ರಫ್ತಾಗಿರುವ ಮಾಹಿತಿ ಲೋಕಾಯುಕ್ತ ವರದಿಯಲ್ಲಿದೆ.

2006-07 ಮತ್ತು 2007ರ ಸೆಪ್ಟೆಂಬರ್ ವರೆಗಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಂಧ್ರ ಪ್ರದೇಶದ ಕಾಕಿನಾಡ, ವಿಶಾಖಪಟ್ಟಣ, ಗೋವಾ, ಚೆನ್ನೈ ಬಂದರುಗಳಿಂದ ಅಕ್ರಮವಾಗಿ ಅತಿ ಹೆಚ್ಚು ಕಬ್ಬಿಣದ ಅದಿರು ರಫ್ತಾಗಿರುವುದು ಲೋಕಾಯುಕ್ತ ತನಿಖೆಯಿಂದ ಬೆಳಕಿಗೆ ಬಂದಿದೆ.

ಬಿಎಸ್‌ಕೆ ಟ್ರೇಡಿಂಗ್‌ ಕಂಪನಿ ಅದಿರು ರಫ್ತಿನಲ್ಲಿ ಪ್ರಮುಖ ಪಾತ್ರವಹಿಸಿದ್ದರೂ, ಇದು ಯಾವ ರೀತಿ ಲಾಭ ಮಾಡಿಕೊಂಡಿದೆ ಎಂಬುದರ ವಿವರ ಲೋಕಾಯುಕ್ತ ವರದಿಯಲ್ಲಿ ಇಲ್ಲ. ಒಟ್ಟಾರೆಯಾಗಿ ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲೇ ಅತಿ ಹೆಚ್ಚು ಅಕ್ರಮ ಗಣಿಗಾರಿಕೆ ನಡೆದಿರುವುದು ಲೋಕಾಯುಕ್ತರು ನೀಡಿರುವ ಅಂಕಿ ಅಂಶದಿಂದ ಖಚಿತಗೊಂಡಿದೆ.

ಆದರೆ ಎರಡು ಕಂಪನಿಗಳಿಗೆ ಪರವಾನಗಿ ಕೊಡಿಸಿ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟವುಂಟು ಮಾಡಿರುವ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಅದೇ ವಿಷಯವನ್ನು ಲೋಕಾಯುಕ್ತರು ತಮ್ಮ ವರದಿಯಲ್ಲಿಯೂ ಪ್ರಸ್ತಾಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+