ಗಣಿ ಲೂಟಿ 2: ರಾಮೇಶ್ವರ ಠಾಕೂರ್ 3233 ಕೋಟಿ ರು.

ex Governor Rameshwar Thakur
ಬೆಂಗಳೂರು, ಆಗಸ್ಟ್ . 01: 2007 ಅಕ್ಟೋಬರ್ ನಿಂದ 2008ರ ಮೇ ವರಗಿನ ರಾಷ್ಟ್ರಪತಿ ಆಡಳಿತಾವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ 3,233 ಕೋಟಿ ರೂ. ನಷ್ಟವುಂಟಾಗಿದೆ. ಈ ಅವಧಿಯಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದರು.

ಅವರ ಸುತ್ತಮುತ್ತ ಕಾರ್ಯನಿರ್ವಹಿಸುತ್ತಿದ್ದ ಐಎಎಸ್‌, ಐಪಿಎಸ್‌ ಮತ್ತು ಐಎಫ್ಎಸ್‌ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ಹಾಗೂ ಅದಿರು ರಫ್ತು ಮಾಡುವ ಕಂಪನಿಗಳಿಗೆ ಸಂಪೂರ್ಣ ಸಹಕಾರ ನೀಡಿ ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ರಾಜ್ಯಪಾಲರ ಅವಧಿಯಲ್ಲಿ 60 ಲಕ್ಷ ಮೆಟ್ರಿಕ್‌ ಟನ್‌ ಅದಿರು ಅಕ್ರಮವಾಗಿ ವಿದೇಶದ ಪಾಲಾಗಿದೆ. ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಗುರುತಿಸಿರುವ 18 ಗಣಿ ಕಂಪನಿಗಳು ರಾಷ್ಟ್ರಪತಿ ಆಡಳಿತದ ಅವಧಿಯಲ್ಲೇ ಗಣಿಗಾರಿಕೆ ಪರವಾನಗಿ ಪಡೆದಿರುವುದು ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+