ಡಿವಿಎಸ್ ಮುಖ್ಯಮಂತ್ರಿಯಾಗಲೆಂದು ಕೃಷ್ಣನಿಗೆ ಪೂಜೆ

ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸದಾನಂದ ಗೌಡ ಅವರು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಇದೀಗ ಯಡಿಯೂರಪ್ಪ ಅವರು ತೆರವು ಮಾಡಿರುವ ಹುದ್ದೆಗೆ ಸದಾನಂದ ಗೌಡರೇ ಬರಬೇಕೆಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಕಳೆದ ಮೂರು ದಿನಗಳಿಂದ ವಿಶೇಷ ಪೂಜೆ ನಡೆಸಲಾಗುತ್ತಿದೆ.
ಪ್ರಸ್ತುತ ಉಡುಪಿ ಸಂಸದರಾಗಿರುವ ಸದಾನಂದ ಗೌಡ ಅವರೇ ಮುಖ್ಯಮಂತ್ರಿಯಾಗಬೇಕೆಂದು ಉಡುಪಿ ಅಷ್ಟಮಠದಲ್ಲಿ ಶ್ರೀಕೃಷ್ಣನಿಗೆ ಸೋಮವಾರ ಸದಾನಂದ ಗೌಡರ ಅಭಿಮಾನಿಗಳು ವಿಶೇಷ ಪೂಜೆ ಮಾಡಿಸಿದರು.











Click it and Unblock the Notifications