ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿವಿಎಸ್ ಮುಖ್ಯಮಂತ್ರಿಯಾಗಲೆಂದು ಕೃಷ್ಣನಿಗೆ ಪೂಜೆ

By Chidambar Baikampady
|
Google Oneindia Kannada News

Special pooja to Udupi Krishna for DVS
ಮಂಗಳೂರು, ಆ. 1 : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಕುತೂಹಲ ಮಡುಗಟ್ಟಿದೆ. ಉಡುಪಿ ಲೋಕಸಭಾ ಸದಸ್ಯ ಡಿ.ವಿ.ಸದಾನಂದ ಗೌಡ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎನ್ನುವ ಬಗ್ಗೆ ಜನರು ತೀವ್ರ ಆಸಕ್ತಿ ಹೊಂದಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸದಾನಂದ ಗೌಡ ಅವರು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಇದೀಗ ಯಡಿಯೂರಪ್ಪ ಅವರು ತೆರವು ಮಾಡಿರುವ ಹುದ್ದೆಗೆ ಸದಾನಂದ ಗೌಡರೇ ಬರಬೇಕೆಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಕಳೆದ ಮೂರು ದಿನಗಳಿಂದ ವಿಶೇಷ ಪೂಜೆ ನಡೆಸಲಾಗುತ್ತಿದೆ.

ಪ್ರಸ್ತುತ ಉಡುಪಿ ಸಂಸದರಾಗಿರುವ ಸದಾನಂದ ಗೌಡ ಅವರೇ ಮುಖ್ಯಮಂತ್ರಿಯಾಗಬೇಕೆಂದು ಉಡುಪಿ ಅಷ್ಟಮಠದಲ್ಲಿ ಶ್ರೀಕೃಷ್ಣನಿಗೆ ಸೋಮವಾರ ಸದಾನಂದ ಗೌಡರ ಅಭಿಮಾನಿಗಳು ವಿಶೇಷ ಪೂಜೆ ಮಾಡಿಸಿದರು.

English summary
Special pooja has been offered to Udupi Srikrishna to elect DV Sadananda Gowda, Udupi-Chikkamagalur MLA, by his followers on Monday, August 1. Selection of chief minister will be done on August 3 in Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X