ಬಿಎಸ್ ಯಡಿಯೂರಪ್ಪ ಅವರ ಆಪ್ತ ಅಶೋಕ್ ಪದತ್ಯಾಗ

ರಾಜ್ಯಪಾಲರು ಅಶೋಕ್ ಅವರ ರಾಜೀನಾಮೆ ಅಂಗೀಕರಿಸಿದ್ದು, ಮುಂದಿನ ಅಡ್ವೊಕೇಟ್ ಜನರಲ್ರ ನೇಮಕವಾಗುವವರೆಗೆ ಹಂಗಾಮಿ ಅಡ್ವೊಕೇಟ್ ಜನರಲ್ ಆಗಿ ಮುಂದುವರಿಯಲಿದ್ದಾರೆ.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಆಪ್ತ ಒಕ್ಕೂಟದ ಮೊದಲ ವಿಕೆಟ್ ಉರುಳಿದೆ. ಯಡಿಯೂರಪ್ಪ ಅವರಿಗೆ ಸದಾ ಕಾನೂನು ಬೆಂಬಲ ನೀಡುತ್ತಿದ್ದ ಅಶೋಕ್ ಅವರ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಅವರು ಹಿಗ್ಗಾ ಮುಗ್ಗಾ ಬೈಯ್ದಿದ್ದರು.
ಹೊಸ ಸರ್ಕಾರದ ಜೊತೆಗೆ ಹೊಸ ಅಡ್ವೊಕೇಟ್ ಜನರಲ್ರನ್ನು ನೇಮಕಾತಿ ನಡೆಯುವುದು ಸಾಮಾನ್ಯ. ಆದರೆ, ಯಡಿಯೂರಪ್ಪ ಅವರ ಆಪ್ತರೇ ಸಿಎಂ ಪಟ್ಟ ಏರುವ ನಿರೀಕ್ಷೆ ಇರುವುದರಿಂದ ಅಶೋಕ್ ಮುಂದುವರೆಯುವ ಸಾಧ್ಯತೆಯಿತ್ತು.
ಆದರೆ, ಅಶೋಕ್ ಅವರು ಯಡಿಯೂರಪ್ಪ ಅವರ ಅಣತಿಯಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಯಡಿಯೂರಪ್ಪ ಬೆಂಬಲಿತ ಅನೇಕ ಅಧಿಕಾರಿಗಳು ಇದೇ ಹಾದಿಯಲ್ಲಿ ಮುಂದುವರೆಯುವ ಸೂಚನೆಗಳು ಸಿಕ್ಕಿವೆ.
ಮಾಜಿ ಕಾನೂನು ಸಚಿವ ಹಾರನಹಳ್ಳಿ ರಾಮಸ್ವಾಮಿ ಅವರ ಸುಪುತ್ರ ಅಶೋಕ್ ಹಾರನಹಳ್ಳಿ ಅವರು 2008ರ ಜೂ.22ರಂದು ಹಾರನಹಳ್ಳಿ ರಾಜ್ಯ ಅಡ್ವೊಕೇಟ್ರಾಗಿ ನೇಮಕಗೊಂಡಿದ್ದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications