ಸಂತೋಷ್ 'ಎನ್ಕೌಂಟರ್'ನಲ್ಲಿ ಸಿಕ್ಕಿಬಿದ್ದ ದಯಾನಾಯಕ್

ಉದ್ಯಮಿಯೊಬ್ಬರ ಪರವಾಗಿ ಅವರು ಕರ್ನಾಟಕದ ಹಿರಿಯ ಅಧಿಕಾರಿ ಮೇಲೆ ಭಾರೀ ಒತ್ತಡ ಹೇರಿದ್ದರೆಂಬ ಆರೋಪ ಕೇಳಿಬಂದಿದೆ. ಇಂತಹದ್ದೊಂದು ಆಘಾತಕಾರಿ ಅಂಶ ಲೋಕಾಯುಕ್ತರು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿದೆ.
ವಿಶೇಷವೆಂದರೆ ದಯಾನಾಯಕ್ ಹೆಸರು ಕೇಳಿಬಂದಿರುವುದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆರೋಪಿಯೆಂದು ಹೇಳಲಾಗಿರುವ ಜಂತಕಲ್ ಗಣಿ ಪ್ರಕರಣದಲ್ಲಿ. ಅಷ್ಟಕ್ಕೂ ದಯಾನಾಯಕ್ ಮೇಲೆ ಹೀಗೊಂದು ಆರೋಪವನ್ನು ಹೊರಿಸಿರುವುದು ಗಣಿ ಇಲಾಖೆಯ ಆಯುಕ್ತರು. ಅವರು ತಮ್ಮ ಟಿಪ್ಪಣಿಯಲ್ಲಿ ದಯಾನಾಯಕ್ ಹೆಸರನ್ನು ನೇರವಾಗಿ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಪ್ರಕರಣ ದಯಾ ಪಾಲಿಗೆ ಕಂಟಕಪ್ರಾಯವಾಗುವ ಸಾಧ್ಯತೆಯಿದೆ.
2007ರ ಆಗಸ್ಟ್ 23ರಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಗಣಿಗಾರಿಕೆ ಲೈಸೆನ್ಸ್ ಅನ್ನು ಒಂದೇ ದಿನ ಎರಡು ಬಾರಿ ನವೀಕರಣಗೊಳಿಸಲಾಗಿತ್ತು. ಆದರೆ ಹೀಗೆ ಗುತ್ತಿಗೆ ನವೀಕರಣ ಮಾಡುವಾಗ ಯಾವುದೇ ಲೀಸ್ ಡೀಡ್ ಮಾಡಿಕೊಂಡಿರಲಿಲ್ಲ. ಇದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿತ್ತು. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಕಾರ್ಯಾಲಯ ಮತ್ತು ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಗಣಿ ಇಲಾಖೆ ಆಯುಕ್ತರಿಗೆ ಪದೇ ಪದೇ ದೂರವಾಣಿ ಕರೆ ಮಾಡಿ ಅದಿರು ಸಾಗಿಸಲು ಪರವಾನಗಿ ನೀಡುವಂತೆ ಒತ್ತಡ ಹೇರಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.
ಇದರ ಜೊತೆಜೊತೆಗೆ ಜಂತಕಲ್ ಗಣಿ ಕಂಪನಿ ಮಾಲೀಕರಾದ ಮುಂಬೈ ಮೂಲದ ದರ್ಶನ್ ಗೋಯಲ್, ವಿನೋದ್ ಗೋಯಲ್ ಹಾಗೂ ಅಮಾನತ್ತುಗೊಂಡಿದ್ದ ಮಹಾರಾಷ್ಟ್ರದ ಪೊಲೀಸ್ ಇನ್ಸ್ಪೆಕ್ಟರ್ ದಯಾನಾಯಕ್ ಕೂಡಾ ಗಣಿ ಇಲಾಖೆ ಆಯುಕ್ತರ ಮೇಲೇ ತಡೆಯಲಾರದಷ್ಟು ಒತ್ತಡ ಹೇರಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications