ಹರ್ಯಾಣ ರಾಜೀವ್ ಗಾಂಧಿ ಟ್ರಸ್ಟ್ನಿಂದಲೂ ಭೂ ಕಬಳಿಕೆ

ಇದೆಲ್ಲ ಜೀವಂತವಿರುವವರು ಹಲ್ಕಟ್ ಕೆಲಸಗಳಾದವು. ಸತ್ತವರ ಹೆಸರು ಹೇಳಿಕೊಂಡೂ ಭೂಮಿಯನ್ನು ದೋಚುವವರು ಇದ್ದಾರೆ. ಇದಕ್ಕೆ ತಾಜಾ ಉದಾಹರಣೆ ಮಾಜಿ ಪ್ರಧಾನಿ, ದಿ. ರಾಜೀವ್ ಗಾಂಧಿ ಅವರ ಕುಟುಂಬ.
ಹರಿಯಾಣದಲ್ಲಿ ರಾಜೀವ್ ಗಾಂಧಿ ಚಾರಿಟೆಬಲ್ ಟ್ರಸ್ಟ್ ಹೆಸರಿನ ಸಂಸ್ಥೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಟ್ರಸ್ಟಿಗಳು. ಈ ಟ್ರಸ್ಟ್ಗೆ ಗುರಗಾಂವ್ ಬಳಿಯ ಉಲ್ವಾಸ್ ಎಂಬ ಗ್ರಾಮದಲ್ಲಿ 8 ಎಕರೆ ಜಮೀನನ್ನು ಅಕ್ರಮವಾಗಿ ನೀಡಲಾಗಿರುವ ಸಂಗತಿ ಈಗ ಬೆಳಕಿಗೆ ಬಂದಿದೆ. ಹರಿಯಾಣದ ಭೂಪಿಂದರ್ ಸಿಂಗ್ ಹೂಡಾ ಸರ್ಕಾರವು ನಿಯಮಗಳನ್ನು ಮೀರಿ 8 ಎಕರೆ ಜಮೀನನ್ನು ರಾಜೀವ್ ಟ್ರಸ್ಟ್ಗೆ ನೀಡಿದೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ರಾಜೀವ್ ಗಾಂಧಿ ಪ್ರತಿಷ್ಠಾನವು ಈ 8 ಎಕರೆ ಜಾಗೆಯಲ್ಲಿ ಇಂದಿರಾ ಗಾಂಧಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿತ್ತು. ಆದರೆ ಮೂಲ ಭೂಮಾಲೀಕರಿಂದ ಹೂಡಾ ಸರ್ಕಾರ ಒತ್ತಾಯದಿಂದ ಜಮೀನು ಪಡೆದಿದೆ ಎಂದು ಭೂಮಿಯ ಮೂಲ ಒಡೆಯರು ದಾವೆ ಹೂಡಿದ್ದರು. ಪ್ರತಿಷ್ಠಿತ ಗಾಂಧಿ ಕುಟುಂಬ ಈ ಟ್ರಸ್ಟಿನಲ್ಲಿ ಇದ್ದ ಕಾರಣ, ಭೂಸ್ವಾಧೀನ ಅಕ್ರಮವಾಗಿದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚಿಹಾಕಲು ಸರ್ಕಾರ ನಾನಾ ರೀತಿಯ ಸರ್ಕಸ್ ನಡೆಸಿತು.
ಭೂಮಾಲೀಕರ ಮೇಲೆ ಸತ್ಯ ಮುಚ್ಚಿಡುವಂತೆ ಸಾಕಷ್ಟು ಒತ್ತಡ ಹೇರಿತು. ಒಂದು ವೇಳೆ ಭೂಸ್ವಾಧೀನ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ವಿವಿಧ ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಅಟ್ಟುವ ಬೆದರಿಕೆಯನ್ನೂ ಹಾಕಲಾಯಿತು ಎಂದು ಉಲ್ವಾಸ್ ಗ್ರಾಮಸ್ಥರು ಕೋರ್ಟಿನಲ್ಲಿ ಅಳಲು ತೋಡಿಕೊಂಡಿದ್ದರು. ವಾದವನ್ನು ಆಲಿಸಿದ ಹರ್ಯಾಣ ಉಚ್ಚ ನ್ಯಾಯಾಲಯ, ಹೂಡಾ ಸರ್ಕಾರವನ್ನು ಸೋಮವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications