ಯಡಿಯೂರಪ್ಪ ವಿರುದ್ಧ ಸಿಬಿಐ ತನಿಖೆಗೆ ಆಗ್ರಹ

ಗಣಿ ಹಗರಣ ಕುರಿತು ಲೋಕಾಯುಕ್ತರ ವರದಿ ಆಧಾರವಾಗಿಟ್ಟುಕೊಂಡು ಯಡಿಯೂರಪ್ಪ ಹಾಗೂ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು ಎಂದು ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಕ್ರಿಮಿನಲ್ ಕೇಸ್ ಗೆ ಶಿಫಾರಸು ಮಾಡಿದ್ದಾರೆ, ಸಿಬಿಐ ತನಿಖೆಗೆ ನಡೆದರೆ ಸಹಾಯಕಾರಿಯಾಗಲಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಗಣಿ ಹಗರಣ ಕುರಿತು ಈಗಾಗಲೇ ಸುಪ್ರೀಂ ಕೋರ್ಟಿನ ಸಮಿತಿ (ಸಿಇಸಿ) ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಿಸಿ ವರದಿ ಸಲ್ಲಿಸಿದೆ. ಇದನ್ನು ತಾರ್ಕಿಕ ತುದಿ ಮುಟ್ಟಿಸಲು ಸಿಬಿಐ ತನಿಖೆಗೆ ಆದೇಶಿಸುವುದು ಅವಶ್ಯವಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.












Click it and Unblock the Notifications