ನೀವು ಯಾವ ಉಪ ಲೋಕಾಯುಕ್ತರ ವ್ಯಾಪ್ತಿಗೆ ಬರುತ್ತೀರಿ?

ನ್ಯಾ. ಮಜಗೆ (ಉಪ ಲೋಕಾಯುಕ್ತ-1) ಅವರಿಗೆ 13 ಜಿಲ್ಲೆಗಳ ವ್ಯಾಪ್ತಿಯನ್ನು ನೀಡಿದ್ದರೆ, ನ್ಯಾ. ಗುರುರಾಜನ್ (ಉಪ ಲೋಕಾಯುಕ್ತ-2) 17 ಜಿಲ್ಲೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ. ಆಯಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವಿರುದ್ಧ ದೂರು ನೀಡುವ ಸಾರ್ವಜನಿಕರು ಆಯಾ ಜಿಲ್ಲೆಗಳ ವ್ಯಾಪ್ತಿ ಹೊಂದಿರುವವರಿಗೇ ಸಲ್ಲಿಸಬೇಕು. ಸ್ವಯಂಪ್ರೇರಿತ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಂದರ್ಭದಲ್ಲೂ ಉಪ ಲೋಕಾಯುಕ್ತರು ಇದೇ ನಿಯಮ ಪಾಲಿಸಬೇಕಾಗುತ್ತದೆ.
ಮಜಗೆ ಅವರ ವ್ಯಾಪ್ತಿ ಪ್ರದೇಶಗಳು: ಬೆಂಗಳೂರು ನಗರ, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಉತ್ತರ ಕನ್ನಡ, ಬಾಗಲಕೋಟೆ, ಹಾವೇರಿ, ವಿಜಾಪುರ, ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆ.
ಗುರುರಾಜನ್ ಮಜಗೆ ಅವರ ವ್ಯಾಪ್ತಿ ಪ್ರದೇಶಗಳು: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ.












Click it and Unblock the Notifications