ಎಚ್ ಡಿ ಕುಮಾರಸ್ವಾಮಿ ದಂಪತಿಗೆ ಲೋಕಾಯುಕ್ತ ಸಮನ್ಸ್

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಸಿರಾಜಿನ್ ಬಾಷಾ ಅವರ ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅಲ್ಲದೆ ಈಗಾಗಲೇ ಆರೋಪ ಹೊತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಒಟ್ಟು 13 ಜನರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಜಂತಕಲ್ ಮೈನಿಂಗ್ ಗುತ್ತಿಗೆ ನೀಡುವಲ್ಲಿ ಅಧಿಕಾರ ದುರುಪಯೋಗ ಹಾಗೂ ಜಿ ಕೆಟಗರಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆಯಲಿರುವ ವಿಚಾರಣೆಯಲ್ಲಿ ಈ ಇಬ್ಬರು ಸೇರಿದಂತೆ ಸಮನ್ಸ್ ಪಡೆದವರೆಲ್ಲರೂ ಆ.27ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಿರತಕ್ಕದ್ದು ಎಂದು ಕೋರ್ಟ್ ಆದೇಶ ನೀಡಿದೆ.
ವಕೀಲ ಸಿರಾಜಿನ್ ಭಾಷಾ ಹಾಗೂ ಕೆ.ಎನ್ ಬಾಲರಾಜ್ ಅವರು ಬೆಂಗಳೂರಿನ ಲೋಕಾಯುಕ್ತರ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಯಡಿಯೂರಪ್ಪ ಅವರ ಮೇಲೆ ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ(Prevention of Corruption Act) 1988ರ ಸೆಕ್ಷನ್ 19(1) ಹಾಗೂ Criminal Procedure Code ಸಿಪಿಸಿ 1973ರ ಸೆಕ್ಷನ್ 197ರ ಅನ್ವಯ ಕ್ರಿಮಿನಲ್ ದೂರು ದಾಖಲಿಸಲಾಗಿತ್ತು. ಇದೇ ರೀತಿ ಭೂ ಹಗರಣ ಪ್ರಕರಣದಲ್ಲಿ ಕುಮಾರಸ್ವಾಮಿ ಕುಟುಂಬ ಭಾಗಿ ಆಗಿರುವ ಬಗ್ಗೆ ವಿಚಾರಣೆ ನಡೆದಿದೆ.












Click it and Unblock the Notifications