ಆಪತ್ತಿಗೆ ಆದ ವರ್ತೂರ್ ಗೆ ಸಚಿವ ಸ್ಥಾನ : ಈಶ್ವರಪ್ಪ ಭರವಸೆ

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ರೆಡ್ಡಿ ಸಹೋದರರು ಹಾಗೂ ಬಾಲಚಂದ್ರ ಜಾರಕಿಹೊಳಿ, ಆನಂದ ಅಸ್ನೋಟಿಕರ್ ಮೊದಲ ಕಂತಿನಲ್ಲಿ ಸ್ಥಾನ ಸಿಕ್ಕಿಲ್ಲದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನೂ ಸಚಿವ ಸ್ಥಾನ ಪಡೆದವರಲ್ಲೂ ಯಡಿಯೂರಪ್ಪ ಅವರ ಜಾತಿ ಪ್ರಾಬಲ್ಯ ಮುಂದುವರೆದಿದೆ. ಇಪ್ಪತ್ತೊಂದು ಸಚಿವರ ಪೈಕಿ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ 10, ಬ್ರಾಹ್ಮಣ 4, ಒಕ್ಕಲಿಗ 3, ಪರಿಶಿಷ್ಟ ಜಾತಿ 3 ಹಾಗೂ ಓಬಿಸಿ ವರ್ಗಕ್ಕೆ ಸೇರಿದ ಒಬ್ಬರು ಸಚಿವರಾಗಿದ್ದಾರೆ,
ಈ ಮಧ್ಯೆ ಎರಡನೆ ಹಂತದ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿ ಬೆಂಬಲಿತ ಶಾಸಕ ವರ್ತೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆಯಂತೆ. ಅರುಣ್ ಜೇಟ್ಲಿ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಬಂದಿರುವ ಪ್ರಕಾಶ್, ವರಿಷ್ಠರ ಭರವಸೆ ಸಿಕ್ಕ ಮೇಲೆ ಸೀದಾ ಈಶ್ವರಪ್ಪ ಅವರ ಹತ್ತಿರ ತೆರಳಿದ್ದಾರೆ.
ಕೋಲಾರದ' ಹುಲಿ'ವರ್ತೂರ್ ಅವರ ತಲೆ ಮೇಲೆ ಕೈ ಇಟ್ಟಿರುವ ಈಶ್ವರಪ್ಪ, ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ ಹಾಗೂ ಅನಂತ್ ಮೂವರ ಹತ್ತಿರವೂ ವರ್ತೂರು ಉತ್ತಮ ಸಂಬಂಧ ಹೊಂದಿದ್ದಾರೆ.
ಅವಿಶ್ವಾಸ ನಿರ್ಣಯ ವೇಳೆಯಲ್ಲಿ ಯಡಿಯೂರಪ್ಪ ಪರ ಮತ ಹಾಕಿ ಸರ್ಕಾರವನ್ನು ಉಳಿಸಿದ್ದರು. ನಿತಿನ್ ಗಡ್ಕರಿ ಅವರು ಕೂಡಾ ವರ್ತೂರು ಅವರ ನಿಷ್ಠೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಆಗ ವರ್ತೂರು ನಿಷ್ಠೆ ರೆಡ್ಡಿಗಳ ಪರ ಇತ್ತು. ಈಗ ಸಚಿವ ಸ್ಥಾನ ನೀಡುವವರ ಪರ ಇದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications