ಇಂದೇ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು: ಈಶ್ವರಪ್ಪ

ಪಕ್ಷದ ವರಿಷ್ಠರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತು ಸುಷ್ಮಾ ಸ್ವರಾಜ್ ಅವರ ಸೂಚನೆ ಮೇರೆಗೆ ಇಂದು ಬೆಳಗ್ಗೆ ದೆಹಲಿಗೆ ತೆರಳಿ ಮಾತುಕತೆ ನಡೆಸಿದ ಮುಖ್ಯಮಂತ್ರಿ ಡಿವಿಎಸ್ ಮತ್ತು ಈಶ್ವರಪ್ಪ ಈ ವಿಷಯ ತಿಳಿಸಿದ್ದಾರೆ.
ಯಡಿಯೂರಪ್ಪ ಬಣದಿಂದ ಮೂವರು, ಶೆಟ್ಟರ್ ಪಾಳಯದಿಂದ 2 ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸೋಮಶೇಖರ ರೆಡ್ಡಿಗೂ ಸಚಿವ ಸ್ಥಾನ ಖಚಿತ ಎನ್ನಲಾಗಿದೆ. ಇದರಿಂದ ಶುಕ್ರವಾರದ ವರಮಹಾಲಕ್ಷ್ಮಿ ಮುನ್ನಾ ಸಂದರ್ಭದಲ್ಲಿ ಭಾರಿ ಸಂಭ್ರಮ ರಾಜ್ಯದಲ್ಲಿ ಅಲ್ಲಲ್ಲ ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಅದರಲ್ಲೂ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿರುವ ಬಳ್ಳಾರಿ ರೆಡ್ಡಿ ಧಣಿಗಳಲ್ಲಿ ಕಾಣಿಸಿಕೊಂಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.












Click it and Unblock the Notifications