ಸಂಪುಟ ಪೀಕಲಾಟ: ಡಿವಿಎಸ್ ಮತ್ತೆ ದೆಹಲಿಯತ್ತ ದೌಡು

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಪಕ್ಷದ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಸತೀಶ್ ಅವರೊಂದಿಗೆ ಬುಧವಾರ ತಡರಾತ್ರಿವರೆಗೆ ಸದಾನಂದಗೌಡ ಅವರು ನಡೆಸಿದ ಚರ್ಚೆ ಫಲಪ್ರದವಾಗಲಿಲ್ಲ. ಶೆಟ್ಟರ್ ಬಣ ರಾಜೀನಾಮೆ ಬೆದರಿಕೆಯೂ ಹಾಕಿದೆ.
ಈ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಷಯ ವರಿಷ್ಠರ ಮುಂದೆಯೇ ತೀರ್ಮಾನವಾಗಲಿ ಎಂಬ ಕಾರಣಕ್ಕಾಗಿ ಗುರುವಾರ ಬೆಳಗ್ಗೆ ದೆಹಲಿಗೆ ಹೊರಟು ಬಂದಿದ್ದಾರೆ.
ಅಲ್ಲಿ ವರಿಷ್ಠರ ಜತೆ ಚರ್ಚೆ ನಡೆಸಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ (ಬಳ್ಳಾರಿಯಲ್ಲಿ ರೆಡ್ಡಿ ಸೋದರರು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಕ್ರಮದಲ್ಲಿ ಪಾಲ್ಗೊಳ್ಳಲು). ವರಿಷ್ಠರು ಸಂಪುಟ ವಿಸ್ತರಣೆಗೆ ಅನುಮತಿ ನೀಡಿದರೆ ಗುರುವಾರ ಸಂಜೆಯೇ ಸಂಪುಟ ವಿಸ್ತರಣೆಯಾಗಲಿದೆ. ಇಲ್ಲದಿದ್ದರೆ ಎರಡು ಮೂರು ದಿನ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆಗೆ ಅಡ್ಡಿಯಾಗಿರುವುದು ರೆಡ್ಡಿ ಸಹೋದರರ ಒತ್ತಡ ತಂತ್ರ ಎನ್ನಲಾಗಿದೆ. ಅವರು ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಡ ಹಾಕಿದ್ದು, ಈ ಹಿನ್ನೆಲೆಯಲ್ಲಿ ಡಿವಿಎಸ್ ದೆಹಲಿಗೆ ದೌಡಾಯಿಸಿದ್ದಾರೆ.
'ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ವರದಿಯಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಆದ್ದರಿಂದ ಆ ವರದಿಯನ್ನೇ ಆಧರಿಸಿ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿರುವ ತೀರ್ಮಾನ ಕೈಗೊಳ್ಳಬಾರದು' ಎಂದು ರೆಡ್ಡಿ ಸಹೋದರರು ಒತ್ತಡ ಹೇರಿದ್ದಾರೆ. ಆದ ಕಾರಣ ಪಕ್ಷದ ವರಿಷ್ಠರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ಡಿವಿಎಸ್ ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications