ಅಲ್ಪಸಂಖ್ಯಾತ ಬೆನ್ನು ಮುರಿದ ಬಿಜೆಪಿ, ಲೆಹರ್ ಗೆ ಸ್ಥಾನ?

ಈ ಮಧ್ಯೆ ಸಚಿವ ಸಂಪುಟ ಸೇರುವ ಆಕಾಂಕ್ಷಿಗಳ ಪಟ್ಟಿಯಲ್ಲಿರದ ಜೈನ ಸಮುದಾಯದ ಲೆಹರ್ ಸಿಂಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ನಡೆದಿದೆ. ಯಡಿಯೂರಪ್ಪ ಹಾಗೂ ಅನಂತ್ ಬಣ ಕಿತ್ತಾಡುವಾಗ ತಟಸ್ಥವಾಗಿ ಉಳಿದಿದ್ದು ಮಮ್ತಾಜ್ ಅಲಿ ಖಾನ್ ಅವರಿಗೆ ಮುಳುವಾಗಿದೆ.
ಯಡಿಯೂರಪ್ಪ, ಅಶೋಕ್ ಅಥವಾ ಕತ್ತಿ ಅವರ ಬೆಂಬಲದಿಂದ ಮತ್ತೆ ಕ್ಯಾಬಿನೆಟ್ ಸೇರುವ ಕನಸು ಕಾಣುತ್ತಿದ್ದ ಖಾನ್ ಗೆ ನಿರಾಸೆಯಾಗಿದೆ. ಆರೆಸ್ಸೆಸ್ ಚಿಂತನೆಯನ್ನು ಮೆಚ್ಚುವ, ಸ್ವಜನರ ವಿರೋಧ ಕಟ್ಟಿಕೊಂಡು ಎಲ್ಲವನ್ನು ನಿಭಾಯಿಸಬಲ್ಲ ಹಿರಿಯ ಮುಖಂಡ ಖಾನ್ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಎಲ್ಲರ ಅಭಿಪ್ರಾಯವಾಗಿದೆ.
ಯಡ್ಡಿ ದೂತ ಸಂಪುಟಕ್ಕೆ? : ಖಾನ್ ಅವರ ಸೇರ್ಪಡೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ ಮಾನಿಪ್ಪಾಡಿ ಹಾಗೂ ಕೆಎಂಡಿಸಿ ಅಧ್ಯಕ್ಷ ಅಬೂಬಕರ್ ಅವರು ಅಡ್ಡಗಾಲು ಹಾಕಿದ್ದಾರೆ ಎಂಬ ಸುದ್ದಿಯಿದೆ. ಲಾಬಿಕೋರ ಲೆಹರ್ ಸಿಂಗ್ ಅವರನ್ನು ಎಂಎಲ್ ಸಿ ಮಾಡಿದ್ದ ಯಡಿಯೂರಪ್ಪ ಅವರು ಈಗ ಕ್ಯಾಬಿನೆಟ್ ನಲ್ಲಿ ಸ್ಥಾನ ಕಲ್ಪಿಸುವಂತೆ ಸದಾನಂದ ಗೌಡರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ವಕ್ಫ್ ಖಾತೆ :1962ರಿಂದ ಬಹುತೇಕ ಮುಸ್ಲಿಮರೇ ವಕ್ಫ್ ಖಾತೆ ನಿರ್ವಹಿಸಿದ್ದಾರೆ. ಈಗ ಈ ಖಾತೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಎಂದು ಪುನಾರಚನೆ ಆಗಿದೆ. ಆದರೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಿದೆ.
ಕೋಲಾರದ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ಗೆ ಅಥವಾ ಸಮಾಜ ಕಲ್ಯಾಣ ಸಚಿವ ನಾರಾಯಣ ಸ್ವಾಮಿಯವರಿಗೆ ಹೆಚ್ಚುವರಿ ಜವಾಬ್ದಾರಿ ಕೊಡುವ ನಿರೀಕ್ಷೆಯಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications