ಹಗರಣ ಸರದಾರ ಬಿಎಸ್ ವೈಗೆ ಜೈಲು ಖಚಿತ: ಉಮಾಶ್ರೀ

ರೈತರ ಅನುಕೂಲಕ್ಕಾಗಿ ಅನುಷ್ಠಾನಗೊಳಿಸಿದ ಭದ್ರಾ ಮೇಲ್ದಂಡೆ ಕಾಮಗಾರಿ ಗುತ್ತಿಗೆ ಅವ್ಯವಹಾರದಲ್ಲಿ ಯಡಿಯೂರಪ್ಪ ಸಿಲುಕಿರುವುದರಿಂದ 153 (6) ಅಡಿ ಹಗರಣವನ್ನು ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತರಿಗೆ ಆದೇಶ ನೀಡಿದೆ.
ಲೋಕಾಯುಕ್ತರ ವರದಿ ಬಳಿಕ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ಎಸಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಜೈಲು ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಾತ್ಯತೀತ ನಾಯಕರ ಅವಶ್ಯಕತೆ ಇದೆ. ಅಧಿಕಾರದಲ್ಲಿರುವ ಬಿಜೆಪಿ ಮಂತ್ರಿಗಳು ಕೇವಲ ದುಡ್ಡಿನ ದುರಾಸೆಯಲ್ಲಿ ಮುಳುಗಿರುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಆರೋಪಿಸಿದರು. ಪಟ್ಟಣದ 1 ಮತ್ತು 4ನೇ ವಾರ್ಡ್ನಲ್ಲಿ ಗುರುವಾರ ನಡೆದ ಕಾಂಗ್ರೆಸ್ ನಡಿಗೆ ಜನರ ಬಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಧುರೀಣ ಸಂಗಪ್ಪ ಹಲ್ಲಿ ಮಾತನಾಡಿ, ಬಿಜೆಪಿ ಸರಕಾರದ ಎಲ್ಲ ಸಚಿವರು, ಶಾಸಕರು ಜೇಬು ತುಂಬಿಕೊಳ್ಳುವ ಕಾಯಕದಲ್ಲಿ ನಿರತರಾಗಿದ್ದಾರೆ. ಪಕ್ಷದ ಆಂತರಿಕ ಕಚ್ಚಾಟದಲ್ಲಿ ಕಾಲ ಹರಣ ಮಾಡುತ್ತಿದ್ದಾರೆಂದು ಆರೋಪಿಸಿದರು.
ಮಹಾಲಿಂಗಪ್ಪ ಕೊಳಿಗುಡ್ಡ, ಬಸಿರ ಸೌದಾಗರ, ಜಾವೇದಅಲಿ ಬಾಗವಾನ, ಶ್ರೀಶೈಲಪ್ಪ ವಜ್ಜರಮಟ್ಟಿ, ಯಲ್ಲನಗೌಡ ಪಾಟೀಲ, ಮಹಾಂತೇಶ ಪಟ್ಟಣಶೆಟ್ಟಿ, ಹಸನಅಲಿ ಸಾಂಗಲಿಕರ, ಎಸ್.ಎಂ.ಯಾದವಾಡ, ಉಸ್ಮಾನ ಪೆಂಡಾರಿ, ಸುರೇಶ ಜಾಧವ, ರಾಮಣ್ಣ ಬಂಡಿವಡ್ಡರ, ಹೊಳೆಪ್ಪ ಬಾಡಗಿ, ಅನೀಲ ದೇಸಾಯಿ, ಗಜಾನನ ಹಾಸಿಲಕರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈಶ್ವರ ಚಮಕೇರಿ ಸ್ವಾಗತಿಸಿ, ನಿರೂಪಿಸಿದರು. ನಾನಾ ಜೋಶಿ ವಂದಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications