ಹಗರಣ ಸರದಾರ ಬಿಎಸ್ ವೈಗೆ ಜೈಲು ಖಚಿತ: ಉಮಾಶ್ರೀ

ರೈತರ ಅನುಕೂಲಕ್ಕಾಗಿ ಅನುಷ್ಠಾನಗೊಳಿಸಿದ ಭದ್ರಾ ಮೇಲ್ದಂಡೆ ಕಾಮಗಾರಿ ಗುತ್ತಿಗೆ ಅವ್ಯವಹಾರದಲ್ಲಿ ಯಡಿಯೂರಪ್ಪ ಸಿಲುಕಿರುವುದರಿಂದ 153 (6) ಅಡಿ ಹಗರಣವನ್ನು ತನಿಖೆ ನಡೆಸುವಂತೆ ನ್ಯಾಯಾಲಯ ಲೋಕಾಯುಕ್ತರಿಗೆ ಆದೇಶ ನೀಡಿದೆ.
ಲೋಕಾಯುಕ್ತರ ವರದಿ ಬಳಿಕ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ಎಸಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಜೈಲು ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಾತ್ಯತೀತ ನಾಯಕರ ಅವಶ್ಯಕತೆ ಇದೆ. ಅಧಿಕಾರದಲ್ಲಿರುವ ಬಿಜೆಪಿ ಮಂತ್ರಿಗಳು ಕೇವಲ ದುಡ್ಡಿನ ದುರಾಸೆಯಲ್ಲಿ ಮುಳುಗಿರುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಆರೋಪಿಸಿದರು. ಪಟ್ಟಣದ 1 ಮತ್ತು 4ನೇ ವಾರ್ಡ್ನಲ್ಲಿ ಗುರುವಾರ ನಡೆದ ಕಾಂಗ್ರೆಸ್ ನಡಿಗೆ ಜನರ ಬಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಧುರೀಣ ಸಂಗಪ್ಪ ಹಲ್ಲಿ ಮಾತನಾಡಿ, ಬಿಜೆಪಿ ಸರಕಾರದ ಎಲ್ಲ ಸಚಿವರು, ಶಾಸಕರು ಜೇಬು ತುಂಬಿಕೊಳ್ಳುವ ಕಾಯಕದಲ್ಲಿ ನಿರತರಾಗಿದ್ದಾರೆ. ಪಕ್ಷದ ಆಂತರಿಕ ಕಚ್ಚಾಟದಲ್ಲಿ ಕಾಲ ಹರಣ ಮಾಡುತ್ತಿದ್ದಾರೆಂದು ಆರೋಪಿಸಿದರು.
ಮಹಾಲಿಂಗಪ್ಪ ಕೊಳಿಗುಡ್ಡ, ಬಸಿರ ಸೌದಾಗರ, ಜಾವೇದಅಲಿ ಬಾಗವಾನ, ಶ್ರೀಶೈಲಪ್ಪ ವಜ್ಜರಮಟ್ಟಿ, ಯಲ್ಲನಗೌಡ ಪಾಟೀಲ, ಮಹಾಂತೇಶ ಪಟ್ಟಣಶೆಟ್ಟಿ, ಹಸನಅಲಿ ಸಾಂಗಲಿಕರ, ಎಸ್.ಎಂ.ಯಾದವಾಡ, ಉಸ್ಮಾನ ಪೆಂಡಾರಿ, ಸುರೇಶ ಜಾಧವ, ರಾಮಣ್ಣ ಬಂಡಿವಡ್ಡರ, ಹೊಳೆಪ್ಪ ಬಾಡಗಿ, ಅನೀಲ ದೇಸಾಯಿ, ಗಜಾನನ ಹಾಸಿಲಕರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈಶ್ವರ ಚಮಕೇರಿ ಸ್ವಾಗತಿಸಿ, ನಿರೂಪಿಸಿದರು. ನಾನಾ ಜೋಶಿ ವಂದಿಸಿದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications