ಅಣ್ಣಾ ಬೆಂಬಲಕ್ಕೆ ಬಂದವರು ಮೈಕಿಗಾಗಿ ಸೆಣಸಿದರು

ಭ್ರಷ್ಟಾಚಾರ ವಿರೋಧಿ ವೇದಿಕೆ ಮತ್ತು ಲೋಕಪಾಲ ಮಸೂದೆ ಪರ ಗುಂಪುಗಳು ಅಣ್ಣಾ ಹಜಾರೆ ಅವರಿಗೆ ಪ್ರತೇಕವಾಗಿ ಬೆಂಬಲ ನೀಡಲು ಮುಂದಾದವು. ಸಾರ್ವಜನಿಕ ಭಾಷಣ ಮಾಡಲು ಎರಡೂ ಬಣಗಳಲ್ಲೂ ತವಕ. ಆದರೆ ಹಿರಿಯ ಗಾಂಧಿವಾದಿ ನಾಮದೇವ್ ಶೆಣೈ ಅವರಿಗೆ ಮಾತನಾಡಲು ಅವಕಾಶ ಕೊಟ್ಟರೆ ಸಾಕು ಎನ್ನುವುದು ವಾದ. ಆದರೆ ಮತ್ತೊಂದು ಗುಂಪು ಲೋಕಪಾಲ ಮಸೂದೆ ಬಗ್ಗೆ ಬೇರೆಯೇ ಸಂಗತಿಗಳಿವೆ, ಅವುಗಳನ್ನು ಬಹಿರಂಗಪಡಿಸಲು ಅವಕಾಶ ಕೊಡಬೇಕು ಎನ್ನುವ ಪಟ್ಟು.
ಅಂತಿಮವಾಗಿ ಹಿರಿಯ ಗಾಂಧಿವಾದಿ ನಾಮದೇವ್ ಶೆಣೈ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಲಾಯಿತು. ಎರಡೂ ಬಣಗಳ ಮೈಕಿಗಾಗಿ ಗುದ್ದಾಡಲು ಮುಂದಾದುದದನ್ನು ಪೊಲೀಸರು ಮಧ್ಯೆ ಪ್ರವೇಶಿಸಿ ತಿಳಿಗೊಳಿಸಿದರು. ಅಂತೂ ಅಣ್ಣಾ ಅವರಿಗೆ ಎರಡೂ ಗುಂಪುಗಳ ಬೆಂಬಲ ಸಿಕ್ಕಿತು.












Click it and Unblock the Notifications