ಭದ್ರಾ ಅಕ್ರಮ ಗಳಿಕೆ: 3 ವರಿಷ್ಠರ ಜತೆ ಯಡಿಯೂರಪ್ಪ ಹಂಚಿಕೆ

'2004-05ರಲ್ಲಿ ಕಾಮಗಾರಿ ಆರಂಭವಾದಾಗ 500 ಕೋಟಿ ರೂಪಾಯಿಗಳನ್ನು ಮೀಸಲು ಇಡಲಾಗಿತ್ತು. ಪ್ರಸ್ತುತ ಕಾಮಗಾರಿ ವೆಚ್ಚವನ್ನು 1020 ಕೋಟಿ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ 14 ಕೋಟಿ ರೂಪಾಯಿಗಳಷ್ಟು ಲಂಚ ಪಡೆದಿರುವ ಯಡಿಯೂರಪ್ಪ ಕೇಂದ್ರದ ಮೂವರು ಪ್ರಭಾವಿ ವರಿಷ್ಠರಿಗೂ ಹಣ ನೀಡಿದ್ದಾರೆ' ಎಂದಿದ್ದಾರೆ ಎಚ್ ಡಿ ಕೆ.
'ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಈ ಕುರಿತು ಆಳವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ನಾನೇ ಆ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.












Click it and Unblock the Notifications