ಭದ್ರಾ ಅಕ್ರಮ ಗಳಿಕೆ: 3 ವರಿಷ್ಠರ ಜತೆ ಯಡಿಯೂರಪ್ಪ ಹಂಚಿಕೆ

bhadra-project-bsy-high-command-gets-share-hdk
ಮೈಸೂರು, ಆಗಸ್ಟ್ 16: 'ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬ ವರ್ಗದಿಂದ ಬಿಜೆಪಿಯ ಮೂವರು ವರಿಷ್ಠರಿಗೆ ಚೆಕ್ ಮೂಲಕ ಹಣ ಸಂದಾಯವಾಗಿದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

'2004-05ರಲ್ಲಿ ಕಾಮಗಾರಿ ಆರಂಭವಾದಾಗ 500 ಕೋಟಿ ರೂಪಾಯಿಗಳನ್ನು ಮೀಸಲು ಇಡಲಾಗಿತ್ತು. ಪ್ರಸ್ತುತ ಕಾಮಗಾರಿ ವೆಚ್ಚವನ್ನು 1020 ಕೋಟಿ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ 14 ಕೋಟಿ ರೂಪಾಯಿಗಳಷ್ಟು ಲಂಚ ಪಡೆದಿರುವ ಯಡಿಯೂರಪ್ಪ ಕೇಂದ್ರದ ಮೂವರು ಪ್ರಭಾವಿ ವರಿಷ್ಠರಿಗೂ ಹಣ ನೀಡಿದ್ದಾರೆ' ಎಂದಿದ್ದಾರೆ ಎಚ್ ಡಿ ಕೆ.

'ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಈ ಕುರಿತು ಆಳವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ನಾನೇ ಆ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+