ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಠಾಣೆ ಮೆಟ್ಟಿಲೇರಿದ ರಾಷ್ಟ್ರಧ್ವಜ ಅವಮಾನ ಪ್ರಕರಣ

By Bm Lavakumar
|
Google Oneindia Kannada News

H VIshwanath showing the pamphlet
ಮೈಸೂರು, ಆ. 16 : ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಕಚೇರಿಯಿಂದ ಪ್ರಕಟಿಸಲಾದ ಕರಪತ್ರದಲ್ಲಿ ರಾಷ್ಟ್ರಧ್ವಜ ಲಾಂಛನದ ಮೇಲೆ ಸದಾನಂದ ಗೌಡ ಅವರ ಭಾವಚಿತ್ರವನ್ನು ಪ್ರಕಟಿಸಿದ ಪ್ರಕರಣ ಹೊಸ ತಿರುವು ಪಡೆದಿದ್ದು, ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಹಂಚಲಾದ "ಸ್ವಾತಂತ್ರ್ಯೋತ್ಸವದ ಸಂದೇಶ" ಎಂಬ ಕರಪತ್ರದ ಮೇಲ್ಭಾಗದಲ್ಲಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರ ಹಾಗೂ ಕೆಳಭಾಗದಲ್ಲಿ ರಾಷ್ಟ್ರಧ್ವಜ ಮತ್ತು ಕೆಲವು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಪ್ರಕಟಿಸಲಾಗಿತ್ತು.

ಇದು ಸಂಸದ ಎಚ್.ವಿಶ್ವನಾಥ್ ಅವರ ಅಸಮಾಧಾನಕ್ಕೆ ಕಾರಣವಾಯಿತಲ್ಲದೆ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಸ್ಥಳದಲ್ಲಿಯೇ ಕರಪತ್ರವನ್ನು ಹರಿದು ಹಾಕಿ ಪ್ರತಿಭಟನೆಯನ್ನು ಕೂಡ ನಡೆಸಿದ್ದರು. ಆ ನಂತರ ಸಚಿವ ರಾಮ್‌ದಾಸ್ ಅವರು ತಮ್ಮಿಂದಾದ ಆಚಾತುರ್ಯಕ್ಕೆ ಕ್ಷಮೆ ಕೇಳಿ ಇಡೀ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

ಆದರೆ ಕಾಂಗ್ರೆಸ್ ಮಾತ್ರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದೆ. ಈ ಸಂಬಂಧ ನಜರ್‌ಬಾದ್ ಠಾಣೆಗೆ ತೆರಳಿ ರಾಮ್‌ದಾಸ್ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ಬಗ್ಗೆ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪೊಲೀಸ್ ಠಾಣೆಗೆ ತೆರಳಿ ಶಾಸಕ ತನ್ವೀರ್ ಶೇಟ್ ಹಾಗೂ ವಿಶ್ವನಾಥ್‌ರವರು ರಾಷ್ಟ್ರಧ್ವಜ ಮುದ್ರಿತವಾಗಿದ್ದ ಕರಪತ್ರವನ್ನು ಹರಿದುಹಾಕಿ ಅವಮಾನ ಮಾಡಿದ್ದಾರೆ ಎಂದು ಪ್ರತಿ ದೂರು ನೀಡಿದ್ದಾರೆ. ಆ ಮೂಲಕ ಎರಡು ಪಕ್ಷಗಳ ನಾಯಕರು ಹಗ್ಗಜಗ್ಗಾಟಕ್ಕಿಳಿದಿದ್ದಾರೆ.

English summary
Complaint has been lodged against Mysore in-charge minister Ramdas alleging insult to National Flag. CM Sadananda Gowda's image was imprinted on pamphlet above national flag. H Vishwanath had objected to it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X