ಬೆಂಗಳೂರಲ್ಲಿ ಜಡಿಮಳೆ : ಇಗೊ ಬಿಬಿಎಂಪಿ ಸಹಾಯವಾಣಿ

ಮೈಸೂರು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಆಮೆಗತಿಯಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಯೋಜನೆಯಿಂದಾಗಿ ಸಂಚಾರಿಗಳಿಗೆ ಅಕ್ಷರಶಃ ನರಕ ಸೃಷ್ಟಿಸಿದೆ. ನಿನ್ನೆ ರಾತ್ರಿ ಮಳೆ ಬಿದ್ದಿದ್ದಕ್ಕೆ ಅತೀವ ವಾಹನ ದಟ್ಟಣೆಯಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಬೇಕಾಗಿತ್ತು. ರಸ್ತೆಯುದ್ದಕ್ಕೂ ಗುಂಡಿಗಳು ಸೃಷ್ಟಿಯಾಗಿದ್ದು, ಕಿಚಿಕಿಚಿ ರಾಡಿ ತುಂಬಿಕೊಂಡಿದೆ.
ಈ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಮತ್ತೆ ಸಂಕಷ್ಟಕ್ಕೀಡಾಗಿದ್ದಾನೆ. ದೇವಸ್ಥಾನದಲ್ಲಿ ಮಳೆ ನೀರು ನುಗ್ಗಿದ್ದರಿಂದ ಭಕ್ತರು ಪರದಾಡುವಂತಾಗಿದೆ. ಸಂಚಾರ ನಿರ್ವಹಣೆ ಕೂಡ ಅವ್ಯವಸ್ಥಿತವಾಗಿರುವುದರಿಂದ ಸಾರ್ವಜನಿಕರು ಬಿಬಿಎಂಪಿ ಜೊತೆಗೆ ಸಂಚಾರಿ ಪೊಲೀಸರನ್ನು ದೂಷಿಸುವಂತಾಗಿದೆ. ಸಂಜೆ ಮೂರು ಮುಕ್ಕಾಲಿಗೆ ನಗರದಲ್ಲೆಲ್ಲ ಕತ್ತಲು ಆವರಿಸಿದೆ.
ರಾಜಾಜಿನಗರದಲ್ಲಿ ಮರವೊಂದು ಉರುಳಿಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಪಾದರಾಯನಪುರದಲ್ಲಿ ಕೆಲ ಮನೆಯ ಗೋಡೆಗಳು ಕುಸಿದಿವೆ. ಕೋರಮಂಗಲದಲ್ಲಿಯೂ ಮಳೆ ಹಚ್ಚಿಹೊಡೆಯುತ್ತಿದೆ. ಪ್ರತಿ ಸಂಜೆ ಮಳೆ ಬೀಳುತ್ತಿರುವುದರಿಂದ ಕಚೇರಿಯನ್ನು ಬೇಗನೆ ಬಿಟ್ಟರೂ ಗಮ್ಯ ತಲುಪುವುದು ಇನ್ನಾವಾಗಲೋ ಎನ್ನುವಂತಾಗಿದೆ. ಇನ್ನು ತಗ್ಗು ಪ್ರದೇಶದಲ್ಲಿ ವಾಸಿಸುವ ನಾಗರಿಕರ ಗೋಳಂತೂ ಕೇಳುವುದೇ ಬೇಡ.
ಬಿಬಿಎಂಪಿಗೆ ಸಹಾಯವಾಣಿ : ಮಳೆಯಿಂದ ತೊಂದರೆಯುಂಟಾದರೆ ಬಿಬಿಎಂಪಿ ಸಹಾಯವಾಣಿ : 080-22660000 ಅಥವಾ ಬಿಬಿಎಂಪಿ ಕಂಟ್ರೋಲ್ ರೂಮ್ : 080-22221188 ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಬಹುದು. ಎಂಥದೇ ತೊಂದರೆ ಉಂಟಾದರೂ ತಕ್ಷಣ ಸಹಾಯಕ್ಕೆ ಸಿದ್ಧ ಎಂದು ಬಿಬಿಎಂಪಿ ಕಮಿಷನರ್ ಸಿದ್ದಯ್ಯ ಹೇಳಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications