ಬೆಂಗಳೂರಲ್ಲಿ ಜಡಿಮಳೆ : ಇಗೊ ಬಿಬಿಎಂಪಿ ಸಹಾಯವಾಣಿ

ಮೈಸೂರು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಆಮೆಗತಿಯಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಯೋಜನೆಯಿಂದಾಗಿ ಸಂಚಾರಿಗಳಿಗೆ ಅಕ್ಷರಶಃ ನರಕ ಸೃಷ್ಟಿಸಿದೆ. ನಿನ್ನೆ ರಾತ್ರಿ ಮಳೆ ಬಿದ್ದಿದ್ದಕ್ಕೆ ಅತೀವ ವಾಹನ ದಟ್ಟಣೆಯಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಬೇಕಾಗಿತ್ತು. ರಸ್ತೆಯುದ್ದಕ್ಕೂ ಗುಂಡಿಗಳು ಸೃಷ್ಟಿಯಾಗಿದ್ದು, ಕಿಚಿಕಿಚಿ ರಾಡಿ ತುಂಬಿಕೊಂಡಿದೆ.
ಈ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಮತ್ತೆ ಸಂಕಷ್ಟಕ್ಕೀಡಾಗಿದ್ದಾನೆ. ದೇವಸ್ಥಾನದಲ್ಲಿ ಮಳೆ ನೀರು ನುಗ್ಗಿದ್ದರಿಂದ ಭಕ್ತರು ಪರದಾಡುವಂತಾಗಿದೆ. ಸಂಚಾರ ನಿರ್ವಹಣೆ ಕೂಡ ಅವ್ಯವಸ್ಥಿತವಾಗಿರುವುದರಿಂದ ಸಾರ್ವಜನಿಕರು ಬಿಬಿಎಂಪಿ ಜೊತೆಗೆ ಸಂಚಾರಿ ಪೊಲೀಸರನ್ನು ದೂಷಿಸುವಂತಾಗಿದೆ. ಸಂಜೆ ಮೂರು ಮುಕ್ಕಾಲಿಗೆ ನಗರದಲ್ಲೆಲ್ಲ ಕತ್ತಲು ಆವರಿಸಿದೆ.
ರಾಜಾಜಿನಗರದಲ್ಲಿ ಮರವೊಂದು ಉರುಳಿಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಪಾದರಾಯನಪುರದಲ್ಲಿ ಕೆಲ ಮನೆಯ ಗೋಡೆಗಳು ಕುಸಿದಿವೆ. ಕೋರಮಂಗಲದಲ್ಲಿಯೂ ಮಳೆ ಹಚ್ಚಿಹೊಡೆಯುತ್ತಿದೆ. ಪ್ರತಿ ಸಂಜೆ ಮಳೆ ಬೀಳುತ್ತಿರುವುದರಿಂದ ಕಚೇರಿಯನ್ನು ಬೇಗನೆ ಬಿಟ್ಟರೂ ಗಮ್ಯ ತಲುಪುವುದು ಇನ್ನಾವಾಗಲೋ ಎನ್ನುವಂತಾಗಿದೆ. ಇನ್ನು ತಗ್ಗು ಪ್ರದೇಶದಲ್ಲಿ ವಾಸಿಸುವ ನಾಗರಿಕರ ಗೋಳಂತೂ ಕೇಳುವುದೇ ಬೇಡ.
ಬಿಬಿಎಂಪಿಗೆ ಸಹಾಯವಾಣಿ : ಮಳೆಯಿಂದ ತೊಂದರೆಯುಂಟಾದರೆ ಬಿಬಿಎಂಪಿ ಸಹಾಯವಾಣಿ : 080-22660000 ಅಥವಾ ಬಿಬಿಎಂಪಿ ಕಂಟ್ರೋಲ್ ರೂಮ್ : 080-22221188 ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಬಹುದು. ಎಂಥದೇ ತೊಂದರೆ ಉಂಟಾದರೂ ತಕ್ಷಣ ಸಹಾಯಕ್ಕೆ ಸಿದ್ಧ ಎಂದು ಬಿಬಿಎಂಪಿ ಕಮಿಷನರ್ ಸಿದ್ದಯ್ಯ ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications