ರಾಜ್ಯೋತ್ಸವ ಪ್ರಶಸ್ತಿ ಲೇವಾದೇವಿಗೆ ಚಾಲನೆ ಕೊಟ್ಟ ಕಾರಜೋಳ

kannada-rajyotsava-awards-only-for-50
ಬಾಗಲಕೋಟೆ, ಆಗಸ್ಟ್ 22: ಪ್ರಸಕ್ತ ಸಾಲಿನಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು 50 ಜನರಿಗೆ ಮಾತ್ರ ನೀಡಲು ಸರ್ಕಾರ ಆಲೋಚಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇದರೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ಲೇವಾದೇವಿಗೆ ಚಾಲನೆ ಕೊಟ್ಟಿದ್ದಾರೆ, ಸಚಿವ ಕಾರಜೋಳ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸರಿಯಾದ ಮಾನದಂಡವಿಲ್ಲ, ಯಾರೆಂದರೆ ಅವರಿಗೆ ನೀಡಲಾಗುತ್ತದೆ ಎಂಬ ಪ್ರಬಲವಾದ ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈಗಿರುವ ಮಾನದಂಡವನ್ನು ಬದಲಾಯಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಪ್ರಸಕ್ತ ವರ್ಷದಿಂದ ಸಾಹಿತ್ಯ, ರಂಗಭೂಮಿ, ಜಾನಪದ ಕ್ಷೇತ್ರದಲ್ಲಿ ಕನಿಷ್ಠ 25 ವರ್ಷ ಸೇವೆ ಸಲ್ಲಿಸಿದವರನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ಮನು ಬಳಿಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ ಝಳಕಿ ಅವರಿಗೆ ವಹಿಸಲಾಗುವುದು ಎಂದು ಸಚಿವ ಕಾರಜೋಳ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+