ಸಚಿವ ಕಾಗೇರಿ ಬಾಯಲ್ಲಿ ಅಲ್ಲಾಹು ಅಕ್ಬರ್

ಭಗವದ್ಗೀತೆಗೆ ಹೋಲಿಸಿದಲ್ಲಿ ಕುರಾನ್ ಕೂಡ ಪವಿತ್ರ ಗ್ರಂಥವಾಗಿದೆ. ಜೀವನ ಸಾರ್ಥಕತೆ ಪಡೆಯಲು ಎರಡು ಮಹಾನ್ ಗ್ರಂಥಗಳ ಪಠನ, ಪ್ರವಚನ, ಪ್ರಚಾರ ಅತ್ಯಗತ್ಯ ಎಂದು ಹೇಳಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ಜಾರುತ್ತಿದ್ದ ಮುಸ್ಲಿಮ್ ಟೋಪಿಯನ್ನು ಸರಿಪಡಿಸಿಕೊಂಡರು.
ಶಿರಸಿಯ ಕಸ್ತೂರಬಾ ನಗರದ 14ನೇ ವಾರ್ಡಿನ ಘರೀಬ ನವಾಜ್ ಮಸೀದಿ ಸರ್ಕಲ್ನಲ್ಲಿ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ವತಿಯಿಂದ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.
ಭಗದ್ಗೀತೆಯಂತೆ ಕುರಾನ್ ನಲ್ಲಿರುವ ತತ್ವಾದರ್ಶಗಳನ್ನು ಪಾಲಿಸಿದಲ್ಲಿ ಜೀವನ ಸಾರ್ಥಕವಾಗುತ್ತದೆ. ಕುರಾನ್ ನಲ್ಲಿ ಆದರ್ಶ ಜೀವನಕ್ಕೆ ಬೇಕಾಗಿರುವ ಸಂದೇಶಗಳಿದ್ದು, ಅದನ್ನು ತಿಳಿಯದವರು ತಪ್ಪು ಕೆಲಸಕ್ಕೆ ಕೈ ಹಾಕುತ್ತಾರೆ. ಅಲ್ಲಾಹು ಎಲ್ಲಿಯೂ ತಪ್ಪು ಸಂದೇಶ ನೀಡಿಲ್ಲ ಎಂದ ಕಾಗೇರಿ ಹೇಳಿದರು.
ಹಿಂಸಾ ಮಾರ್ಗವನ್ನು ಬಿಟ್ಟು ಸಹಬಾಳ್ವೆಯ ಜೀವನ ಮಾಡಬೇಕು. ಮುಸ್ಲಿಮ್ ಬಾಂಧವರು ಪವಿತ್ರವಾಗಿರುವ ಹಾಗೂ ಶಾಂತಿ ಸಂದೇಶ ಸಾರುವ ರಂಜಾನ್ ಹಬ್ಬದಲ್ಲಿ ಉಪವಾಸ ಮಾಡಿ ತಮ್ಮ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ನಿಜಕ್ಕೂ ಶ್ಲಾಘನೀಯ ಎಂದು ಸಚಿವ ಕಾಗೇರಿ ಅಭಿಪ್ರಾಯಪಟ್ಟರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications