ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಪಾಲ ಬಿಕ್ಕಟ್ಟು: ಇಂದು ಸರ್ವ ಪಕ್ಷ ಸಭೆ, ನಿರ್ಣಯ ಸಾಧ್ಯತೆ

By Srinath
|
Google Oneindia Kannada News

lokpal-stalemate-pm-all-party-meet-aug-24
ನವದೆಹಲಿ, ಆಗಸ್ಟ್ 24: ಉಪವಾಸನಿತರ ಅಣ್ಣಾ ಹಜಾರೆ ಅವರ ಆರೋಗ್ಯ ಸ್ಥಿತಿ ವಿಷಮಿಸಿರುವ ಬೆನ್ನಲ್ಲೇ ಪ್ರಧಾನಿ ಸಿಂಗ್ ಬುಧವಾರ ಸರ್ವ ಪಕ್ಷ ಸಭೆ ಕರೆದಿದ್ದು, ವಿವಾದಿತ ಲೋಕಪಾಲ ಮಸೂದೆ ಬಗ್ಗೆ ಸರ್ವ ಸಮ್ಮತ ನಿರ್ಧಾರ ಕೈಗೊಳ್ಳುವ ಯತ್ನ ನಡೆಸಿದ್ದಾರೆ.

ಈ ಮಧ್ಯೆ ಮಂಗಳವಾರ ರಾತ್ರಿ ಅಣ್ಣಾ ನಿಕಟವರ್ತಿಗಳೊಂದಿಗೆ ಸರಕಾರಿ ಸಂಧಾನಕಾರ ಪ್ರಣಬ್ ಮುಖರ್ಜಿ ಮಾತುಕತೆ ನಡೆಸಿದೆ. ಲೋಕಪಾಲ ಮಸೂದೆ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಮಾತುಕತೆಯಿಂದ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗದೆ ಅಪೂರ್ಣಗೊಂಡಿತು. ಬುಧವಾರ ಉಭಯ ಬಣಗಳು ಪುನಃ ಸಭೆ ಸೇರಲಿವೆ.

ಹಣಕಾಸು ಸಚಿವ ಪ್ರಣವ್ ಮುಖರ್ಜಿ, ಕಾನೂನು ಸಚಿವ ಸಲ್ಮಾನ್ ಖುರ್ಷಿದ್, ಅಣ್ಣಾ ತಂಡದ ಅರವಿಂದ್ ಕೇಜ್ರಿವಾಲ್, ಕಿರಣ್ ಬೇಡಿ ಹಾಗೂ ಪ್ರಶಾಂತ್ ಭೂಷಣ್ ಅವರ ನಡುವೆ ಮೂರು ಗಂಟೆ ಮಾತುಕತೆ ನಡೆಯಿತು.

ಅನಂತರ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿ ಚರ್ಚೆ ನಡೆಸಿದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ, ಹಿರಿಯ ಸಚಿವರಾದ ಪ್ರಣವ್ ಮುಖರ್ಜಿ, ಎ. ಕೆ. ಆಂಟನಿ ಅವರೊಂದಿಗೆ ಪ್ರಧಾನಿ ಸಮಾಲೋಚಿಸಿದರು. ಬಳಿಕ ಸಿಂಗ್ ಮತ್ತು ರಾಹುಲ್ ಇಬ್ಬರೇ ಮಾತುಕತೆ ನಡೆಸಿದರು. ರಾಹುಲ್ ಮತ್ತು ಸಿಂಗ್ ಚರ್ಚೆಯ ಪರಿಣಾಮವೇ ಈ ಪತ್ರ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಸಂಸತ್ತಿನ ಸ್ಥಾಯಿ ಸಮಿತಿ ಮುಂದಿರುವ ಸರ್ಕಾರದ ಲೋಕಪಾಲ ಮಸೂದೆಯನ್ನು ಹಿಂದಕ್ಕೆ ಪಡೆದು ನಾಗರಿಕ ಸಂಘಟನೆಗಳ ಜನ ಲೋಕಪಾಲ ಮಸೂದೆಯನ್ನೇ ಮಂಡಿಸಬೇಕು. ಈ ಮಸೂದೆಯಲ್ಲಿರುವ ಸಣ್ಣಪುಟ್ಟ ಲೋಪಗಳನ್ನು ಕಾನೂನು ಇಲಾಖೆಯು ಸರಿಪಡಿಸಿ, ಈಗ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲೇ ಅಂಗೀಕರಿಸಬೇಕು ಎಂದು ಅಣ್ಣಾ ತಂಡ ಹಟ ಹಿಡಿದಿದೆ.

English summary
Prime Minister Manmohan Singh called an all-party meet on Wednesday as Anna Hazare's fast entered the ninth day. Sources said the government's decision to table Jan Lokpal Bill and amend the government's Lokpal Bill would be taken only after all political parties are consulted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X