ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭದ್ರಾ ಅಕ್ರಮ: ಯಡ್ಡಿ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ

By Srinath
|
Google Oneindia Kannada News

bhadra-project-bsy-prosecution-to-continue-hc
ಬೆಂಗಳೂರು, ಆಗಸ್ಟ್ 26: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ರಾಜ್ಯದ ನ್ಯಾಯಾಲಯಗಳು ಒಂದರ ಮೇಲೊಂದರಂತೆ ಆಘಾತ ನೀಡುತ್ತಿದ್ದು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

'ಲೋಕಾಯುಕ್ತ ನ್ಯಾಯಾಲಯ ಎಫ್ ಐಆರ್ ದಾಖಲಿಸಿರುವುದು ಕಾನೂನು ಸಮ್ಮತವಾಗಿದೆ. ತನಿಖೆಗೆ ತಡೆಯಾಜ್ಞೆ ನಿಡಲಾಗದು' ಎಂದು ಸ್ಪಷ್ಟಪಡಿಸಿದೆ. ಇದರೊಂದಿಗೆ ಯಡಿಯೂರಪ್ಪ ಬಂಧನ ಕಾಲ ಸನ್ನಿಹಿತವಾಗುತ್ತಿದೆ ಎನ್ನಬಹುದು.

'2004-05ರಲ್ಲಿ ಕಾಮಗಾರಿ ಆರಂಭವಾದಾಗ 500 ಕೋಟಿ ರೂಪಾಯಿಗಳನ್ನು ಮೀಸಲು ಇಡಲಾಗಿತ್ತು. ಪ್ರಸ್ತುತ ಕಾಮಗಾರಿ ವೆಚ್ಚವನ್ನು 1020 ಕೋಟಿ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಯಡಿಯೂರಪ್ಪ ಕೋಟ್ಯಂತರ ರು ಲಂಚ ಪಡೆದಿದ್ದಾರೆ' ಎಂದು ಆರೋಪಿಸಿ ರಾಜ್ಯಸಭೆ ಸದಸ್ಯ, ಜೆಡಿ ಎಸ್ ನೇತಾರ ವೈ ಎಸ್ ವಿ ದತ್ತಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

English summary
In Bhadra Upper irrigation project Karnataka high court denies stay against ex Chief Minister B.S. Yeddyurappa prosecution on Aug 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X