ನಾನ್ಯಾಕೆ ಹೆಗ್ಡೆ ಕ್ಷಮೆಯಾಚಿಸಲಿ ಎಚ್ಡಿಕೆ ಸವಾಲು

ಸುವರ್ಣ ಸುದ್ದಿ ವಾಹಿನಿ ನಡೆಸಿದ ಸಂದರ್ಶನದ ವೇಳೆ ನಿಕಟಪೂರ್ವ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರ ಬಗ್ಗೆ ನಾನಾಡಿದ ಮಾತುಗಳೆಲ್ಲ ಸತ್ಯ. ಈ ಕುರಿತು ನಾನು ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ.
'ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಸಂತೋಷ್ ಹೆಗ್ಡೆ ಅವರ ರಾತ್ರಿ ಜೀವನದ ಬಗ್ಗೆ ಕೆಲವೇ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ' ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
'ಸಂತೋಷ್ ಹೆಗ್ಡೆ ಅವರ ರಾತ್ರಿ ಖರ್ಚು ವೆಚ್ಚದ ಬಗ್ಗೆ ನಾನಾಡಿದ ಮಾತುಗಳು ನೂರಕ್ಕೆ ನೂರು ಸತ್ಯ' ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಗರದ ಪುಲಕೇಶಿ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಷಯದ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಘೋಷಿಸಿದರು.











Click it and Unblock the Notifications