'ಲೋಕಪಾಲ' ಜನಕ ಡಾ. ಲಕ್ಷ್ಮಿಮಲ್ ಸಿಂಘ್ವಿ ಬಗ್ಗೆ ಒಂದಿಷ್ಟು

1931ರ ನವೆಂಬರ್ 9ರಂದು ರಾಜಸ್ಥಾನದ ಜೋಧ್ ಪುರದಲ್ಲಿ ಜೈನರ ಕುಟುಂಬದಲ್ಲಿ ಜನಿಸಿದ ಲಕ್ಷ್ಮಿ ಮಲ್ ಸಿಂಘ್ವಿ ಮುಂದೆ ಖ್ಯಾತ ವಕೀಲರಾದರು. ಸುಪ್ರೀಂ ಕೋರ್ಟಿನ ಹಿರಿಯ ವಕೀಲರೂ ಆಗಿದ್ದರು. ಅಲ್ಲಿಂದ ಮುಂದೆ ಸಂಸತ್ತಿಗೂ ಆಯ್ಕೆಯಾದರು. 1962-67ರಲ್ಲಿ ಮೂರನೇ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜೋಧ್ ಪುರದಿಂದ ಆಯ್ಕೆಯಾದರು. ಸಂಸತ್ತಿನಲ್ಲಿ ಕಾಲಿರಿಸುತ್ತಿದ್ದಂತೆ 'ಲೋಕಪಾಲ'ಕ್ಕೆ ಅಂಕಿತರಾದರು.
ಮುಂದೆ 1998–2004 ಅವಧಿಯಲ್ಲಿ ಬಿಜೆಪಿ ವತಿಯಿಂದ ರಾಜ್ಯಸಭೆಗೆ ಆಯ್ಕೆಯಾದರು. ಬಹು ಭಾಷಾ ವಿದ್ವಾಂಸರಾಗಿದ್ದರು. ಲೇಖಕಿ ಶ್ರೀಮತಿ ಕಮಲಾ ಬೇದ್ ಇವರ ಧರ್ಮಪತ್ನಿ. ನ್ಯಾಯವಾದಿ ಡಾ. ಅಭಿಷೇಕ್ ಮನು ಸಿಂಘ್ವಿ ಇವರ ಹಿರಿಯ ಪುತ್ರ. ಪುತ್ರಿ ಅಭಿಲಾಷ ಸಿಂಘ್ವಿ ಸಹ ನ್ಯಾಯವಾದಿ. ಅನುಭವ್ ಸಿಂಘ್ವಿ ಮತ್ತು ಆವಿಷ್ಕಾರ್ ಸಿಘ್ವಿ ಅವರು ಡಾ. ಅಭಿಷೇಕ್ ಅವರ ಪುತ್ರರು. ಇನ್ನು ಆಶತಾ ಮತ್ತು ನಿಶತಾ ಲಾಲಬಾಯಿ ಅವರುಗಳು ಅಭಿಲಾಷ ಅವರ ಕುಡಿಗಳು.
1998ರಲ್ಲಿ ಪದ್ಮಭೂಷಣ ಪುರಸ್ಕಾರವನ್ನು ಸ್ವೀಕರಿಸಿದರು. ವಿ.ಕೆ. ಕೃಷ್ಣ ಮೆನನ್ ನಂತರ ಇಂಗ್ಲೆಂಡಿನಲ್ಲಿ ದೀರ್ಘ ಕಾಲ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ ಕೀರ್ತಿ ಇವರದಾಗಿದೆ. 2007ರ ಅಕ್ಟೋಬರ್ 6ರಂದು 75 ವರ್ಷದ ಡಾ. ಲಕ್ಷ್ಮಿ ಮಲ್ ಸಿಂಘ್ವಿ ನಿಧನರಾದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications