ಶ್ರೀರಾಮುಲು ಜೊತೆ ಗುರುತಿಸಿಕೊಂಡಿದ್ದ ರಾಮಚಂದ್ರ

ಪೊಲೀಸ್ ಹುದ್ದೆಗೆ ಪುನರ್ ನೇಮಕವಾದ ನಂತರ ಕೆಲ ದಿನಗಳ ಕಾಲ ಕರ್ತವ್ಯ ನಿರ್ವಹಿಸಿ ರಾಜೀನಾಮೆ ನೀಡಿದ್ದನು. ಸೇವಾ ನಿವೃತ್ತಿಯ ನಂತರ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಆಪ್ತರಲ್ಲಿ ಗುರುತಿಸಿಕೊಂಡು ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ಕೋಟ್ಯಾಂತರ ರೂಪಾಯಿಯನ್ನೂ ಗಳಿಸಿದ್ದ.
ಶ್ರೀರಾಮುಲು ಭೇಟಿ : ಸ್ಥಳಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು, ಕೆಎಂಎಫ್ ಅಧ್ಯಕ್ಷ, ಶಾಸಕ ಜಿ. ಸೋಮಶೇಖರರೆಡ್ಡಿ ಭೇಟಿ ನೀಡಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಜಿ. ಕ್ಯಾತನ್ ನೇತೃತ್ವದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications