ಅನೈತಿಕ ಸಂಬಂಧ : ಪೇದೆಯ ಬರ್ಬರ ಹತ್ಯೆ

ಗ್ರಾಮೀಣ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಕೊಲೆಯಾದ ಮಾಜಿ ಪೊಲೀಸ್ ಪೇದೆ ರಾಮಚಂದ್ರ (40). ಈತನು ದೇವೀನಗರದಲ್ಲಿ ಓರ್ವ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರಕ್ಕಾಗಿ ಆ ಮಹಿಳೆಯ ಸಹೋದರ ಹಾಗೂ ಭತ್ರಿಯ ಪಟ್ಟಾಭಿ ಎನ್ನುವ ಆರೋಪಿಯ ನೇತೃತ್ವದ ಗುಂಪು ರಾಮಚಂದ್ರನಿಗೆ ಪ್ರಾಣಬೆದರಿಕೆ ಹಾಕಿ ಅನೈತಿಕ ಸಂಬಂಧ ಬಿಡಬೇಕು ಎಂದು ಬೆದರಿಸಿದ್ದರು.
ಪಟ್ಟಾಭಿಯ ಬೆದರಿಕೆಯಿಂದ ಆಕ್ರೋಶಗೊಂಡಿದ್ದ ರಾಮಚಂದ್ರ, ತನ್ನ ಆಪ್ತರ ಜೊತೆಯಲ್ಲಿ ಮಾರಕಾಸ್ತ್ರಗಳಿಂದ ಭತ್ರಿಗೆ ಸೋಮವಾರ ರಾತ್ರಿ ಆಗಮಿಸಿ ಪಟ್ಟಾಭಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದ. ಪಟ್ಟಾಭಿ ನೇತೃತ್ವದ ಯುವಕರ ತಂಡ ಈ ಮಾಹಿತಿ ಮೊದಲೇ ಪಡೆದಿದ್ದ ಕಾರಣ ರಾಮಚಂದ್ರನ ಮೇಲೆ ಕಬ್ಬಿಣದ ರಾಡುಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ರಾಮಚಂದ್ರ ಜೀವಂತವಾಗಿದ್ದಾಗಲೇ ಗೋಣಿಚೀಲದಲ್ಲಿ ಹಾಕಿ ಕಾಲುವೆಗೆ ಹರಿಬಿಡಲು ಯೋಜಿಸಿದ್ದರು. ಆದರೆ, ಗೋಣಿಚೀಲದಲ್ಲಿದ್ದ ರಾಮಚಂದ್ರ ಕಿರುಚುತ್ತಿದ್ದ ಕಾರಣ ಆತನ ಕುತ್ತಿಗೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಿ ಗೋಣಿಚೀಲದಲ್ಲೇ ಶವವನ್ನು ಕರಿಮಾರೆಮ್ಮ ಗುಡಿಯ ಸಮೀಪದ ಗುಡ್ಡದ ಬಯಲು ಪ್ರದೇಶದಲ್ಲಿ ಬಿಟ್ಟು ಪರಾರಿ ಆಗಿದ್ದಾರೆ.
ಭತ್ರಿಯಲ್ಲಿ ಸೋಮವಾರ ಈರಣ್ಣ ದೇವರ ಉತ್ಸವ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕಾಗಿ ಹೋಗಿದ್ದ ಪೊಲೀಸರು ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ರಾತ್ರೋರಾತ್ರಿ ಕೊಲೆ ಮಾಡಿದ ಆರೋಪಿಗಳನ್ನು ಶೋಧಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ. ಆದರೆ, ಪ್ರಮುಖ ಆರೋಪಿ ಪಟ್ಟಾಭಿಯ ಸಹೋದರ ಮತ್ತು ಅತ್ತಿಗೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಪಟ್ಟಾಭಿಯ ಮನೆಗೆ ಕೆಎಸ್ಸಾರ್ಪಿ ತುಕಡಿಯನ್ನು ಹಾಕಿ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಭತ್ರಿಯಲ್ಲಿ ಪ್ರಸ್ತುತ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಗಸ್ತು ಹೆಚ್ಚಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications