ಅನೈತಿಕ ಸಂಬಂಧ : ಪೇದೆಯ ಬರ್ಬರ ಹತ್ಯೆ

ಗ್ರಾಮೀಣ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಕೊಲೆಯಾದ ಮಾಜಿ ಪೊಲೀಸ್ ಪೇದೆ ರಾಮಚಂದ್ರ (40). ಈತನು ದೇವೀನಗರದಲ್ಲಿ ಓರ್ವ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರಕ್ಕಾಗಿ ಆ ಮಹಿಳೆಯ ಸಹೋದರ ಹಾಗೂ ಭತ್ರಿಯ ಪಟ್ಟಾಭಿ ಎನ್ನುವ ಆರೋಪಿಯ ನೇತೃತ್ವದ ಗುಂಪು ರಾಮಚಂದ್ರನಿಗೆ ಪ್ರಾಣಬೆದರಿಕೆ ಹಾಕಿ ಅನೈತಿಕ ಸಂಬಂಧ ಬಿಡಬೇಕು ಎಂದು ಬೆದರಿಸಿದ್ದರು.
ಪಟ್ಟಾಭಿಯ ಬೆದರಿಕೆಯಿಂದ ಆಕ್ರೋಶಗೊಂಡಿದ್ದ ರಾಮಚಂದ್ರ, ತನ್ನ ಆಪ್ತರ ಜೊತೆಯಲ್ಲಿ ಮಾರಕಾಸ್ತ್ರಗಳಿಂದ ಭತ್ರಿಗೆ ಸೋಮವಾರ ರಾತ್ರಿ ಆಗಮಿಸಿ ಪಟ್ಟಾಭಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದ. ಪಟ್ಟಾಭಿ ನೇತೃತ್ವದ ಯುವಕರ ತಂಡ ಈ ಮಾಹಿತಿ ಮೊದಲೇ ಪಡೆದಿದ್ದ ಕಾರಣ ರಾಮಚಂದ್ರನ ಮೇಲೆ ಕಬ್ಬಿಣದ ರಾಡುಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ರಾಮಚಂದ್ರ ಜೀವಂತವಾಗಿದ್ದಾಗಲೇ ಗೋಣಿಚೀಲದಲ್ಲಿ ಹಾಕಿ ಕಾಲುವೆಗೆ ಹರಿಬಿಡಲು ಯೋಜಿಸಿದ್ದರು. ಆದರೆ, ಗೋಣಿಚೀಲದಲ್ಲಿದ್ದ ರಾಮಚಂದ್ರ ಕಿರುಚುತ್ತಿದ್ದ ಕಾರಣ ಆತನ ಕುತ್ತಿಗೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಿ ಗೋಣಿಚೀಲದಲ್ಲೇ ಶವವನ್ನು ಕರಿಮಾರೆಮ್ಮ ಗುಡಿಯ ಸಮೀಪದ ಗುಡ್ಡದ ಬಯಲು ಪ್ರದೇಶದಲ್ಲಿ ಬಿಟ್ಟು ಪರಾರಿ ಆಗಿದ್ದಾರೆ.
ಭತ್ರಿಯಲ್ಲಿ ಸೋಮವಾರ ಈರಣ್ಣ ದೇವರ ಉತ್ಸವ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕಾಗಿ ಹೋಗಿದ್ದ ಪೊಲೀಸರು ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ರಾತ್ರೋರಾತ್ರಿ ಕೊಲೆ ಮಾಡಿದ ಆರೋಪಿಗಳನ್ನು ಶೋಧಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ. ಆದರೆ, ಪ್ರಮುಖ ಆರೋಪಿ ಪಟ್ಟಾಭಿಯ ಸಹೋದರ ಮತ್ತು ಅತ್ತಿಗೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಪಟ್ಟಾಭಿಯ ಮನೆಗೆ ಕೆಎಸ್ಸಾರ್ಪಿ ತುಕಡಿಯನ್ನು ಹಾಕಿ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಭತ್ರಿಯಲ್ಲಿ ಪ್ರಸ್ತುತ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಗಸ್ತು ಹೆಚ್ಚಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications