ಶಾಸ್ತ್ರೀ, ಅಣ್ಣಾ ಉಡುಗೆ ತೊಡುಗೆಯಲ್ಲಿಯೂ ಸಾಮ್ಯತೆ

"ಜೈ ಜವಾನ್ ಜೈ ಕಿಸಾನ್" ಘೋಷಣೆಯ ಸೃಷ್ಟಿಕರ್ತ ಶಾಸ್ತ್ರೀಜಿ 1965ರಲ್ಲಿ ಪಾಕಿಸ್ತಾನದೊಂದಿಗೆ ಯುದ್ಧ ಸಮಯದಲ್ಲಿ ಭಾರತದ ಆಹಾರ ಉತ್ಪಾದನೆ ಹೆಚ್ಚಿಸುವ ಅಗತ್ಯವಿದೆ ಎಂದು ಒತ್ತು ನೀಡಿದ್ದರು. ಸೆಪ್ಟೆಂಬರ್ 23, 1965ರಲ್ಲಿ ಕದನ ವಿರಾಮ ಘೊಷಣೆ ನಂತರ, ಶಾಸ್ತ್ರೀಜಿ ಮತ್ತು ಪಾಕಿಸ್ತಾನದ ಅಧ್ಯಕ್ಷ ಮಹಮ್ಮದ್ ಅಯೂಬ್ ಖಾನ್ ಜನವರಿ 10, 1966ರಂದು ಶಾಂತಿ ಒಪ್ಪಂದ ಘೋಷಣೆ ಮಾಡಿ ತಾಷ್ಕೆಂಟ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು.
ಅದೇ ರೀತಿ, ಅಣ್ಣಾ ನಾಲ್ಕು ದಶಕಗಳಿಂದ ಹೆಚ್ಚು ಬೆಳಕಿಗೆ ಬಾರದೆ ಭ್ರಷ್ಟಾಚಾರ ವಿರೋಧಿ ಜನ ಲೋಕಪಾಲ ಮಸೂದೆಯ ಬಗ್ಗೆ ಭಾರತೀಯರಲ್ಲಿ ಅರಿವು ಮೂಡಿಸಿದರು. ಆದರೆ ಸತತ 8 ವ್ಯರ್ಥ ಪ್ರಯತ್ನಗಳ ಹೊರತಾಗಿಯೂ ಮತ್ತು ಪ್ರತಿಬಾರಿ ಮಂಡನೆಗೆ ಒಂದೊಂದು ಹೊಸ ರೀತಿಯ ಆವೃತ್ತಿ ಸಿದ್ದವಾದರೂ ಸಂಸತ್ತಿನಲ್ಲಿ ಮನ್ನಣೆ ಸಿಗಲಿಲ್ಲ. ಜೂನ್ 2011ರಲ್ಲಿ ಅಣ್ಣಾ ತಮ್ಮ ಮೊದಲ ಉಪವಾಸ ಸತ್ಯಾಗ್ರಹದಲ್ಲಿ ಮಸೂದೆಗೆ ಅಂತಿಮ ಕರಡು ರೂಪಿಸುವ ಕೆಲಸ ಮಾಡಲು ಜಂಟಿ ಸಮಿತಿಯನ್ನು ರಚಿಸಲು ಸರ್ಕಾರವನ್ನು ಒತ್ತಾಯಿಸಿದರು.
ಸಿವಿಲ್ ಸೊಸೈಟಿಯ ಬೇಡಿಕೆಗಳಿಗೆ ಕೇಂದ್ರ ಬಗ್ಗದಿದ್ದರಿಂದ ಅಣ್ಣಾ ಮತ್ತೆ ಉಪವಾಸ ಸತ್ಯಾಗ್ರಹ ಕುಳಿತರು. ಕೊನೆಗೆ ತಮ್ಮ ಹೋರಾಟದಲ್ಲಿ ಬಾಗಶಃ ಜಯಗಳಿಸಿದ್ದು ಇರುವ ಅನೇಕ ಇತಿಮಿತಿಗಳ ನಡುವೆಯೂ ಸರಕಾರ, ಅಣ್ಣಾ ಮತ್ತು ಅವರ ತಂಡದ ಬೇಡಿಕೆಗಳನ್ನು ಮಸೂದೆಯಲ್ಲಿ ಜಾರಿಗೊಳಿಸಲು ಒಪ್ಪಿಸುವಂತೆ ಮಾಡಿದ್ದಾರೆ.












Click it and Unblock the Notifications