Get Updates
Get notified of breaking news, exclusive insights, and must-see stories!

ಗಾಂಧೀಜಿ ದಾರಿಯಲ್ಲಿ ಶಾಸ್ತ್ರಿ ಮತ್ತು ಅಣ್ಣಾ ನಡಿಗೆ

Anna Hazare and Lal Bahadur Shastri
ದೇಶದ ಪಿತಾಮಹ ಮಹಾತ್ಮ ಗಾಂಧೀಜಿಯವರು ಆರಂಭಿಸಿದ ಅಹಿಂಸಾ ಮಾರ್ಗದಲ್ಲಿ ಶಾಸ್ತ್ರೀಜಿ ಮತ್ತು ಅಣ್ಣಾರವರು ನಂಬಿಕೆ ಇಟ್ಟಿದ್ದರು, ಎಂದು ಇವರು ನಡೆಸಿದ ಚಳವಳಿ ಮುಖಾಂತರ ನಮಗೆ ಗೊತ್ತಾಗುತ್ತದೆ. ಗಾಂಧಿಯವರ 1921ರ ಅಸಹಕಾರ ಚಳವಳಿಯಲ್ಲಿ ಶಾಸ್ತ್ರೀಜಿಯವರು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ನಿಷೇದಾಜ್ಞೆ ಸ್ಥಳದಲ್ಲಿ ಮೆರವಣಿಗೆಯಲ್ಲಿ ಬಾಗವಹಿಸಿದ್ದ ಅವರನ್ನು ಬಂಧಿಸಲಾಗಿತ್ತು. ಬಂಧಿತರಾದ ಅವರನ್ನು ಚಿಕ್ಕ ವಯಸ್ಸಿನ ಬಾಲಕ ಎಂದು ಬಿಡುಗಡೆ ಮಾಡಿದರು. ನಂತರ 1930ರಲ್ಲಿ ಮಹಾತ್ಮ ಗಾಂಧಿಯವರ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿ ತಮ್ಮ ಜೀವನವನ್ನು ಸ್ವಾತಂತ್ರ್ಯ ಹೋರಾಟಕ್ಕೆ ಮುಡುಪಾಗಿಟ್ಟರು. ಆಗ ಅವರಿಗೆ 2 ವರ್ಷ 6 ತಿಂಗಳು ಜೈಲುವಾಸವಾಗಿತ್ತು.

ಆದರೆ, ಅಣ್ಣಾ ರಾಮಲೀಲಾ ಮೈದಾನದಲ್ಲಿ ತಮ್ಮ 12 ದಿನದ ಉಪವಾಸ ಸತ್ಯಾಗ್ರಹದ ಸರ್ಕಾರದ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ರಾಷ್ಟ್ರವ್ಯಾಪಿ ತಮ್ಮ ಅನುಯಾಯಿಗಳನ್ನು ನಿಯಂತ್ರಿಸುವ ಮೂಲಕ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾದರು. ದೇಶದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯ ಜನರೂ ಈ ಗಾಂಧೀವಾದಿ ತೋರಿಸಿಕೊಟ್ಟ ಮಾರ್ಗದಲ್ಲಿ ನಡೆದು ಅವರ ಕಾರ್ಯಕ್ಕೆ ಕೈ ಜೋಡಿಸಿದರು.

ಈ ಮೇಲಿನ ಕೆಲ ಹೋಲಿಕೆಗಳ ನಂತರವೂ ಅಣ್ಣ ಮತ್ತು ಶಾಸ್ತ್ರೀಜಿ ದೇಶದ ಜನರಿಂದ ಎರಡು ವಿಭಿನ್ನ ಪ್ರತಿಕ್ರಿಯೆಗಳು ಎದುರಿಸಿರಬಹುದಾಗಿದೆ ಎಂದು ನಂಬಬಹುದು. ಆಧುನಿಕ ಮಾಧ್ಯಮ ಮತ್ತು ತಂತ್ರಜ್ಞಾನದ ಸಹಾಯದಿಂದ ಅಣ್ಣಾ ಸಾಮೂಹಿಕವಾಗಿ ರಾಷ್ಟ್ರವ್ಯಾಪ್ತಿ ತಲುಪಿದ್ದಾರೆ. ಜನರು ಅಣ್ಣಾ ಹಜಾರೆಯವರನ್ನು ಪೂಜಿಸಲು ಪ್ರಾರಂಭಿಸಿದ್ದು, ಅನೇಕರು ಅಣ್ಣಾ ಹಜಾರೆಗಾಗಿ ಒಂದು ದೇವಾಲಯವನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕೆ ಅಣ್ಣಾ ಅವಕಾಶ ನೀಡುವುದಿಲ್ಲ ಅನ್ನುವುದು ಎರಡನೇ ವಿಚಾರ. ಕೆಲ ವರದಿಗಳ ಪ್ರಕಾರ ಅಣ್ಣಾರವರ 12 ದಿನದ ಸುದೀರ್ಘ ಉಪವಾಸದ ಘಟನೆಯನ್ನು ಮುಂಬೈನಲ್ಲಿ ಗಣೇಶ ಪೂಜಾ ಸಮಯದಲ್ಲಿ ನಿರೂಪಣಾ ವಿಷಯವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆದರೆ, ಶಾಸ್ತ್ರೀಜಿಯವರ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ಹಾಗು ದೇಶದ ಪ್ರಗತಿಗಾಗಿ ಅವರ ಅತ್ಯುನ್ನತ ಕೊಡುಗೆಯ ಹೊರತಾಗಿಯೂ, ಇತರೆ ಸ್ವಾತಂತ್ರ್ಯ ಹೋರಾಟಗಾರರು ಅಥವ ಕೆಲ ರಾಜಕಾರಣಿಗಳು ಪಡೆದ ಮನ್ನಣೆಯನ್ನು ಲಾಲ್ ಬಹಾದುರ್ ಶಾಸ್ತ್ರೀಜಿಯವರೂ ಪಡೆಯಲಿಲ್ಲ ಎನ್ನುವುದು ವಿಷಾದದ ಸಂಗತಿ.

ಅಕ್ಟೋಬರ್ 2ರ ಗಾಂಧಿ ಜಯಂತಿ ಆಚರಿಸುವ ಸಂದರ್ಭದಲ್ಲಿ ಬಹುತೇಕ ಜನರು ಶಾಸ್ತ್ರೀಜಿಯವರನ್ನು ನೆನಪಿಸಿಕೊಳ್ಳುವ ಗೊಡವೆಗೇ ಹೋಗುವುದಿಲ್ಲ. ಗಾಂಧೀಜಿಯವರ ಖ್ಯಾತಿ ಮತ್ತು ಜನಪ್ರಿಯತೆ ಅವರನ್ನು ಮಸುಕಾಗಿಸಿಬಿಟ್ಟಿದೆ. ಒಮ್ಮೆ CNN-IBN ಸಂಪಾದಕ ಹಾಗು ಮುಖ್ಯಸ್ಥ ರಾಜದೀಪ್ ಸರ್ದೇಸಾಯಿ " ಒಂದು ರೀತಿಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವನ್ನು ಗಾಂಧಿಯವರ ಜತೆ ಹಂಚಿಕೊಳ್ಳುತ್ತಿರುವುದು ದುಃಖದ ಸಂಗತಿ. ಮಹಾತ್ಮರವರ ನೆರಳಿನಲ್ಲಿ ಬದುಕುವುದು ಬಹು ಕಷ್ಟ" ಎಂದು ಟ್ವೀಟ್ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+