ಗಾಂಧೀಜಿ ದಾರಿಯಲ್ಲಿ ಶಾಸ್ತ್ರಿ ಮತ್ತು ಅಣ್ಣಾ ನಡಿಗೆ
ಆದರೆ, ಅಣ್ಣಾ ರಾಮಲೀಲಾ ಮೈದಾನದಲ್ಲಿ ತಮ್ಮ 12 ದಿನದ ಉಪವಾಸ ಸತ್ಯಾಗ್ರಹದ ಸರ್ಕಾರದ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ರಾಷ್ಟ್ರವ್ಯಾಪಿ ತಮ್ಮ ಅನುಯಾಯಿಗಳನ್ನು ನಿಯಂತ್ರಿಸುವ ಮೂಲಕ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾದರು. ದೇಶದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯ ಜನರೂ ಈ ಗಾಂಧೀವಾದಿ ತೋರಿಸಿಕೊಟ್ಟ ಮಾರ್ಗದಲ್ಲಿ ನಡೆದು ಅವರ ಕಾರ್ಯಕ್ಕೆ ಕೈ ಜೋಡಿಸಿದರು.
ಈ ಮೇಲಿನ ಕೆಲ ಹೋಲಿಕೆಗಳ ನಂತರವೂ ಅಣ್ಣ ಮತ್ತು ಶಾಸ್ತ್ರೀಜಿ ದೇಶದ ಜನರಿಂದ ಎರಡು ವಿಭಿನ್ನ ಪ್ರತಿಕ್ರಿಯೆಗಳು ಎದುರಿಸಿರಬಹುದಾಗಿದೆ ಎಂದು ನಂಬಬಹುದು. ಆಧುನಿಕ ಮಾಧ್ಯಮ ಮತ್ತು ತಂತ್ರಜ್ಞಾನದ ಸಹಾಯದಿಂದ ಅಣ್ಣಾ ಸಾಮೂಹಿಕವಾಗಿ ರಾಷ್ಟ್ರವ್ಯಾಪ್ತಿ ತಲುಪಿದ್ದಾರೆ. ಜನರು ಅಣ್ಣಾ ಹಜಾರೆಯವರನ್ನು ಪೂಜಿಸಲು ಪ್ರಾರಂಭಿಸಿದ್ದು, ಅನೇಕರು ಅಣ್ಣಾ ಹಜಾರೆಗಾಗಿ ಒಂದು ದೇವಾಲಯವನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕೆ ಅಣ್ಣಾ ಅವಕಾಶ ನೀಡುವುದಿಲ್ಲ ಅನ್ನುವುದು ಎರಡನೇ ವಿಚಾರ. ಕೆಲ ವರದಿಗಳ ಪ್ರಕಾರ ಅಣ್ಣಾರವರ 12 ದಿನದ ಸುದೀರ್ಘ ಉಪವಾಸದ ಘಟನೆಯನ್ನು ಮುಂಬೈನಲ್ಲಿ ಗಣೇಶ ಪೂಜಾ ಸಮಯದಲ್ಲಿ ನಿರೂಪಣಾ ವಿಷಯವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಆದರೆ, ಶಾಸ್ತ್ರೀಜಿಯವರ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ಹಾಗು ದೇಶದ ಪ್ರಗತಿಗಾಗಿ ಅವರ ಅತ್ಯುನ್ನತ ಕೊಡುಗೆಯ ಹೊರತಾಗಿಯೂ, ಇತರೆ ಸ್ವಾತಂತ್ರ್ಯ ಹೋರಾಟಗಾರರು ಅಥವ ಕೆಲ ರಾಜಕಾರಣಿಗಳು ಪಡೆದ ಮನ್ನಣೆಯನ್ನು ಲಾಲ್ ಬಹಾದುರ್ ಶಾಸ್ತ್ರೀಜಿಯವರೂ ಪಡೆಯಲಿಲ್ಲ ಎನ್ನುವುದು ವಿಷಾದದ ಸಂಗತಿ.
ಅಕ್ಟೋಬರ್ 2ರ ಗಾಂಧಿ ಜಯಂತಿ ಆಚರಿಸುವ ಸಂದರ್ಭದಲ್ಲಿ ಬಹುತೇಕ ಜನರು ಶಾಸ್ತ್ರೀಜಿಯವರನ್ನು ನೆನಪಿಸಿಕೊಳ್ಳುವ ಗೊಡವೆಗೇ ಹೋಗುವುದಿಲ್ಲ. ಗಾಂಧೀಜಿಯವರ ಖ್ಯಾತಿ ಮತ್ತು ಜನಪ್ರಿಯತೆ ಅವರನ್ನು ಮಸುಕಾಗಿಸಿಬಿಟ್ಟಿದೆ. ಒಮ್ಮೆ CNN-IBN ಸಂಪಾದಕ ಹಾಗು ಮುಖ್ಯಸ್ಥ ರಾಜದೀಪ್ ಸರ್ದೇಸಾಯಿ " ಒಂದು ರೀತಿಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವನ್ನು ಗಾಂಧಿಯವರ ಜತೆ ಹಂಚಿಕೊಳ್ಳುತ್ತಿರುವುದು ದುಃಖದ ಸಂಗತಿ. ಮಹಾತ್ಮರವರ ನೆರಳಿನಲ್ಲಿ ಬದುಕುವುದು ಬಹು ಕಷ್ಟ" ಎಂದು ಟ್ವೀಟ್ ಮಾಡಿದ್ದರು.