ಆಂಕೋಲಾ ಹನಿ ಬೀಚಿನಲ್ಲಿ ಬೆಂಗಳೂರು ಕುಟುಂಬ ನೀರುಪಾಲು

ಬೆಂಗಳೂರಿನ ವೈಟ್ಫೀಲ್ಡ್ ನಿವಾಸಿ, ಮೂಲತಃ ಹೈದರಾಬಾದ್ನ ಪ್ರವೀಣ ನೇವಿತಾ (35), ಪತ್ನಿ ಸಂಜಲಿ ಪ್ರವೀಣ ನೇವಿತಾ (30), ಅಮಿತ ವಿಷ್ಣುಕುಮಾರ ಮುರಾರ್ಕ (35) ಇವರೇ ಸಮುದ್ರದ ಅಲೆಗೆ ಸಿಕ್ಕು ಮೃತರಾದವರು. ಪ್ರವೀಣ ನೇವಿತಾ ಮತ್ತು ಸಂಜಲಿ ಪ್ರವೀಣ ಅವರ ಮಗಳು ದಿವ್ಯಾ, ಅಮಿತ ವಿಷ್ಣುಕುಮಾರ ಮುರಾರ್ಕ ಅವರ ಪುತ್ರಿ ಮೂರು ವರ್ಷದ ಅನುಷ್ಕಾಳನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಗಳಾಗಿರುವ ಇವರು ಶುಕ್ರವಾರ ಮುಂಜಾನೆ ತಾಲೂಕಿನ ಹೊನ್ನೆಬೈಲ್ ರೆಸಾರ್ಟ್ಗೆ ಆಗಮಿಸಿದ್ದರು. ಬೆಳಿಗ್ಗೆ 11 ಗಂಟೆಯ ಸುಮಾರಿಗೆ ವಿಹಾರಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಈ ಅವಘಡ ಸಂಭವಿಸಿದೆ.
ಸಮುದ್ರ ತೀರ ಸಂಚರಿಸಿ ಪುನಃ ರೆಸಾರ್ಟ್ಗೆ ಸಮುದ್ರದ ಅಂಚಿನಲ್ಲಿರುವ ಬಂಡೆಗಲ್ಲಿನ ಮೇಲಿನಿಂದ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸಮುದ್ರ ಅಲೆಯ ರಭಸಕ್ಕೆ ಆಯತಪ್ಪಿ ಮೂವರು ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಸ್. ರಮೇಶ, ತಹಶೀಲ್ದಾರ ಡಾ. ಉದಯಕುಮಾರ ಶೆಟ್ಟಿ, ಸಿ.ಪಿ.ಐ. ಶಿವಾನಂದ ಚಲವಾದಿ, ಪಿ.ಎಸ್.ಐ. ಜಾಯ್ ಅಂಥೋನಿ ಆಗಮಿಸಿ ಪರಿಶೀಲಿಸಿದ್ದಾರೆ.
ಕರಾವಳಿ ಕಾವಲು ಪಡೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಪೊಲೀಸರು ನಾಪತ್ತೆಯಾದವರ ಹುಡುಕಾಟ ನಡೆಸಿದ್ದಾರೆ. ಈ ಬೀಚ್ನಲ್ಲಿ ಇಂತಹ ಅವಘಡ ಸಂಭವಿಸಿದ್ದು ಇದೇ ಮೊದಲ ಬಾರಿಯಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡುಮಾಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಯ ಅಬ್ಬರದಿಂದಾಗಿ ಸಮುದ್ರದ ಅಲೆಗಳು ರಭಸದಿಂದ ಕೂಡಿದ್ದು, ಸ್ಥಳೀಯ ಮೀನುಗಾರರು ಕಡಲಿಗಿಳಿಯಲು ಹಿಂಜರಿಯುತ್ತಿದ್ದಾರೆ. ಆದರೆ ಪ್ರವಾಸಕ್ಕೆಂದು ಬಂದ ಐವರು ವಿಹಾರಕ್ಕೆಂದು ತೆರಳಿದ ಸಂದರ್ಭದಲ್ಲಿಯೇ ಕಡಲ ಅಬ್ಬರಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications