ಕರಡಿ ಕರೆತಂದ ಯಡಿಯೂರಪ್ಪ ಚುನಾವಣೆ ಪ್ರಚಾರದಿಂದ ದೂರ

koppal-by-election-bsy-bjp-in-two-minds
ಬೆಂಗಳೂರು, ಸೆ.2: ಕಳೆದ ಮಾರ್ಚ್‌ನಲ್ಲಿ ಕರಡಿ ಸಂಗಣ್ಣ ಕೊಪ್ಪಳ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬರುವಲ್ಲಿ ಯಡಿಯೂರಪ್ಪ ಅವರೇ ಪ್ರಮುಖ ಪಾತ್ರ ವಹಿಸಿದ್ದರು. ಯಡಿಯೂರಪ್ಪ ಅವರ ಭರವಸೆಗಳನ್ನು ನಂಬಿಕೊಂಡೇ ಸಂಗಣ್ಣ ಬಿಜೆಪಿಗೆ ಬರಲು ಸಾಧ್ಯವಾಯಿತು. ಹೀಗಾಗಿ ಈಗ ಅದೇ ಯಡಿಯೂರಪ್ಪ ಅವರನ್ನು ಬಿಟ್ಟು ಚುನಾವಣೆ ಎದುರಿಸಲು ಸ್ವತಃ ಕರಡಿ ಸಂಗಣ್ಣ ಕೂಡ ಒಪ್ಪುವುದು ಕಷ್ಟ.

ಜತೆಗೆ ಯಡಿಯೂರಪ್ಪ ಅವರ ಬೆಂಬಲಿಗ ಮಂತ್ರಿಗಳು ಹಾಗೂ ಶಾಸಕರು ಕೂಡ ತಮ್ಮ ನಾಯಕನನ್ನು ಪ್ರಚಾರದಲ್ಲಿ ಬಳಸಿಕೊಳ್ಳಲು ಒತ್ತಡ ಹೇರುವ ಸಾಧ್ಯತೆಯಿದೆ. ಯಡಿಯೂರಪ್ಪ ಅವರ ಆಗಮನದಿಂದಲೇ ಗೆಲ್ಲುವಂತಾಯಿತು. ಅವರ ವರ್ಚಸ್ಸು ಕುಂದಿಲ್ಲ ಎಂಬುದನ್ನು ಸಾಬೀತುಪಡಿಸುವ ಅನಿವಾರ್ಯತೆಯೂ ಯಡಿಯೂರಪ್ಪ ಬೆಂಬಲಿಗರಲ್ಲಿದೆ.

ಇದೆಲ್ಲಕ್ಕಿಂತ ಹೆಚ್ಚಾಗಿ ಖುದ್ದು ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು. ಕಳೆದೊಂದು ತಿಂಗಳಿಂದ ಯಾವುದೇ ಪ್ರವಾಸವಿಲ್ಲದೆ ಕುಳಿತಿರುವ ಯಡಿಯೂರಪ್ಪ ಅವರು ಈ ಒಂದು ಸಂದರ್ಭವನ್ನು ಬಳಸಿಕೊಂಡು ಮತ್ತೆ ಜನರ ಬಳಿಗೆ ಹೋಗಲು ಮುಂದಾಗುವ ಅವಕಾಶವನ್ನು ಬಿಟ್ಟುಕೊಡುವ ಸಾಧ್ಯತೆ ತೀರಾ ಕಡಮೆ.

ಹಾಗೊಂದು ವೇಳೆ ಯಡಿಯೂರಪ್ಪ ಅವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ಬಯಸಿದಾಗಲೂ ಬಿಜೆಪಿ ನಾಯಕರು ನಿರಾಕರಿಸಿದಲ್ಲಿ ಅದು ಮತ್ತೂಂದು ಸುತ್ತಿನ ಬಿಕ್ಕಟ್ಟಿಗೆ ಕಾರಣವಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಒಟ್ಟಾರೆ ಯಡಿಯೂರಪ್ಪ ಅವರನ್ನು ಕೊಪ್ಪಳ ಉಪಚುನಾವಣೆಯ ಪ್ರಚಾರಕ್ಕೆ ಬಳಸಿಕೊಳ್ಳುವುದು ಅಥವಾ ಬಿಡುವುದು ಬಿಜೆಪಿ ನಾಯಕರಿಗೆ ಮತ್ತೂಂದು ಹೊಸ ಸಮಸ್ಯೆಯಾಗಿಯೇ ಕಾಡುವುದಂತೂ ನಿಶ್ಚಿತ ಎನ್ನುವಂತಾಗಿದೆ.

ಅಂದು ಬೆಳಗ್ಗೆ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯಾಧ್ಯಕ್ಷ ಕೆ.ಎಸ್‌.ಈಶ್ವರಪ್ಪ, ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಸುಮಾರು 12 ಮಂತ್ರಿಗಳು ಹಾಗೂ ಇತರ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಕಾರ್ಯತಂತ್ರ, ಪ್ರಚಾರ ಸ್ವರೂಪ, ಚುನಾವಣಾ ಉಸ್ತುವಾರಿಗಳ ನೇಮಕ ಮತ್ತಿತರ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+