ಅನಂತ ಸಂಪತ್ತು; ಬಿ ಕೊಠಡಿ ಸುಪ್ರೀಂ ನಿರ್ಧಾರ ಮುಂದೂಡಿಕೆ

ಇದೀಗ ತಾನೆ ಬಂದ ವರದಿಯ ಪ್ರಕಾರ ಅನಂತಪದ್ಮನಾಭ ದೇಗುಲದ ಬಿ ಉಗ್ರಾಣ ತೆರೆಯುವ ನಿರ್ಧಾರ ಕುರಿತಾದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 6ಕ್ಕೆ ಮುಂದೂಡಿದೆ.
ಆದರೆ ಕೋರ್ಟಿಗೆ ರಾಜಮನೆತನ ಸಲ್ಲಿಸಿರುವ ಅರ್ಜಿ ತಿರುಳು ಎಷ್ಟು ಸತ್ಯಾಂಶದಿಂದ ಕೂಡಿದೆ...? "ಬಿ" ಕೊಠಡಿ ತೆರೆದರೆ ನಿಜಕ್ಕೂ ಕೆಡಕುಂಟಾಗುತ್ತದೆಯೆ...? ದೈವಜ್ಞರ ಅಭಿಪ್ರಾಯ ತಿರುಚಲಾಗಿದೆಯೆ...? ರಾಜಮನೆತನದ ಹಿರಿಯ ಮಾರ್ತಂಡ ವರ್ಮ ದೇಗುಲದ ಆಭರಣಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆಯೆ ….? ಈ ವಿದ್ಯಮಾನಗಳ ಸುತ್ತ ಅನುಮಾನಗಳ ಹುತ್ತ ಬೃಹದಾಕಾರವಾಗಿ ಬೆಳೆಯುತ್ತಿದೆ!
ಅನಂತ ಪದ್ಮನಾಭ ದೇಗುಲಕ್ಕೆ ಸಾವಿರಾರು ವರ್ಷಗಳ ಇತಿಹಾಸ. ಅಂದಿನಿಂದಲೂ ದೇವಾಲಯದಲ್ಲಿ ಮುತ್ತು-ರತ್ನ-ವಜ್ರ-ವೈಢೂರ್ಯ-ಚಿನ್ನ-ಬೆಳ್ಳಿ ಸಂಗ್ರಹಣೆಯಾಗಿದೆ. ಊಹೆಗೂ ಮೀರಿದ ಸಂಪತ್ತಿನ ಜಮಾವಣೆಯಾಗಿದೆ. ಸಂಪೂರ್ಣ ಚಿನ್ನದಿಂದಲೇ ಮಾಡಿದ ಬೃಹದಾಕಾರದ ವಿಗ್ರಹ-ಆಭರಣಗಳ ವಿವರ ತಿಳಿದರೆ ಅಚ್ಚರಿ ಬೆರೆತ ದಿಗ್ಭ್ರಮೆಯಾಗುತ್ತದೆ. ಇಂಥ ಆಸ್ತಿ ಅನ್ಯರ ಪಾಲಿಗೆ ಸುಲಭದ ತುತ್ತಾಗದಂತೆ 'ಎತ್ತರ ಯೋಗಂ" ಹದ್ದಿನ ಕಣ್ಣಿನಂತೆ ದೃಷ್ಟಿಯಿಟ್ಟು ಕಾಪಾಡುತ್ತಿತ್ತು.
ಈ ಸಮಿತಿಗೆ ವಿರುದ್ಧವಾಗಿ ರಾಜ ಮಾರ್ತಂಡ ವರ್ಮ ದೇಗುಲವನ್ನು 'ರಾಜ ಪ್ರಭುತ್ವದ ವಶ" ಮಾಡಿಕೊಂಡಾಗ ಅಸಮಾಧಾನದ ಭುಗಿಲ್ಲೆದಿತ್ತು. ಮುಂದೆ ಈ ರಾಜನೆ ಪದ್ಮನಾಭನಿಗೆ ಸಕಲವನ್ನು ಸಮರ್ಪಿಸಿ ದಾಸನಾಗಿ ಅಧಿಕಾರ ನಡೆಸಿದ. ಇದರ ವಿವರಗಳೆಲ್ಲವೂ ಹಿಂದಿನ ಲೇಖನಗಳಲ್ಲಿವೆ.
ಅತ್ಯಮೂಲ್ಯ ಸಂಪತ್ತುಳ್ಳ ಭಂಡಾರದ ವಿವರ ಹೊರ ಪ್ರಪಂಚಕ್ಕೆ ತಿಳಿಯುವಂತೆ ಮಾಡಿದ್ದು ನಿವೃತ್ತ ಐ.ಪಿ.ಎಸ್. ಅಧಿಕಾರಿ ಸುಂದರ ರಾಜನ್. ಇವರ ಕುಟುಂಬ ಕೂಡ ದೇಗುಲ ಮತ್ತು ರಾಜ ಮನೆತನಕ್ಕೆ ನಿಕಟವರ್ತಿಯಾಗಿತ್ತು ಎಂಬುದು ಬಹಳ ಗಮನಾರ್ಹ. ಅಪಾರ ಧಾರ್ಮಿಕ ನಂಬಿಕೆಯ ಕುಟುಂಬದ ವ್ಯಕ್ತಿಯೇಕೆ ಅನಂತ ಪದ್ಮನಾಭ ದೇಗುಲ ಮತ್ತು ಅದರ ಸಂಪತ್ತು ಸರಕಾರದ ಪರಿಧಿಗೆ ಒಳಪಡಬೇಕು ಎಂದು ಬಯಸಿದರು…? ದೇಗುಲದ ಐಶ್ವರ್ಯಕ್ಕೆ ಸಂಬಂಧಿಸಿ ಅವ್ಯವಹಾರಗಳಾಗುತ್ತಿದ್ದವೆ…? ಸಂಪತ್ತಿನ ಸೋರಿಕೆಯಾಗುತ್ತಿತ್ತೆ….?
ಈ ಅನುಮಾನ ಬಗೆಹರಿಸಲು ಸುಂದರ ರಾಜನ್ ಇಲ್ಲ. 2011ರ ಜುಲೈ 17 ರಂದು ಮೃತರಾಗಿದ್ದಾರೆ. ಈ ಬಳಿಕ ಅಂದರೆ ಆಗಸ್ಟ್ 19 ರಂದು ಕೇರಳದ ಮಾಜಿ ಮುಖ್ಯಮಂತ್ರಿ ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದ್ ಅವರು ಟ್ರಾವೆಂಕೂರು ರಾಜವಂಶದ ಈಗಿನ ಮುಖ್ಯಸ್ಥ ಮಾರ್ತಂಡ ವರ್ಮ ಮೇಲೆ ಮಾಡಿರುವ ವಾಗ್ದಾಳಿ ಇದರ ಮೇಲೆ ಬೆಳಕು ಚೆಲ್ಲಬಹುದೆ…?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications