ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ಮೋದಿ

ಮಾಜಿ ಗೃಹ ಸಚಿವ ಹರೇನ್ ಮಾಂಡ್ಯ ಹತ್ಯೆ ಪ್ರಕರಣವನ್ನು ಮತ್ತೆ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸುವ ಮೂಲಕ ಪಕ್ಷದ ನಿಲುವನ್ನು ಕೆಣಕಿದ ಮಾಜಿ ಸಚಿವ ಜಸ್ಪಾಲ್ ಸಿಂಗ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.
8 ವರ್ಷ ಹಳೆಯದಾದ ಪ್ರಕರಣದಲ್ಲಿ 12 ಮಂದಿ ಆರೋಪಿಗಳನ್ನು ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಖುಲಾಸೆಗೊಳಿಸಿತ್ತು. ಇದರಿಂದ ಅಸಮಾಧಾನಗೊಂಡ ಜಸ್ಪಾಲ್ ಅವರು ಪಾಂಡ್ಯನ್ ಹತ್ಯೆ ಪ್ರಕರಣದಲ್ಲಿ ಮರು ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ, ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು.
ಕಳೆದ ವಾರ ನ್ಯಾ. ಆರ್ಎ ಮೆಹ್ತಾ ಅವರನ್ನು ಲೋಕಾಯುಕ್ತರನ್ನಾಗಿ ನೇಮಿಸಿದ ರಾಜ್ಯಪಾಲರ ಕ್ರಮವನ್ನು ಜಸ್ಪಾಲ್ ಕೊಂಡಾಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಂಡಿದೆ ಎಂದು ವಡೋದರಾ ಬಿಜೆಪಿ ಘಟಕದ ಅಧ್ಯಕ್ಷ ಭರತ್ ದಂಗಾರ್ ಭಾನುವಾರ ಹೇಳಿದ್ದಾರೆ.












Click it and Unblock the Notifications