ಜನಾರ್ದನ ರೆಡ್ಡಿ ಬಂಧನ ನಿರೀಕ್ಷಿತ: ಸಂತೋಷ್ ಹೆಗ್ಡೆ

ಅಧಿಕಾರ ದುರುಪಯೋಗ ಮಾಡಿಕೊಂಡವರ ಹಣೆಬರಹ ಅಷ್ಟೇ. ಇದು ಕೇವಲ ಆರಂಭ ಮಾತ್ರ. ಮುಂದಿನ ದಿನಗಳಲ್ಲಿ ಇದರ ವ್ಯಾಪ್ತಿಗೆ ಯಾರು ಯಾರು ಬರುತ್ತಾರೆ ನೋಡಬೇಕು. ರೆಡ್ಡಿಗಳ ಬಂಧನ ನಿರೀಕ್ಷಿತವಾಗಿತ್ತು.
ಗಡಿ ನಾಶ ಇವತ್ತು ಪ್ರಮುಖವಾದದ್ದು, ತಪ್ಪು ಮಾಡಿದವರಿಗೆಲ್ಲ ಶಿಕ್ಷೆ ಖಂಡಿತ. ನಮ್ಮ ಪೊಲೀಸರಿಗೆ(ಲೋಕಾಯುಕ್ತ) ಹಲವು ಬಾರಿ ಬೆದರಿಕೆ ಒಡ್ಡಿದ್ದ ರೆಡ್ಡಿಗಳಿಗೆ ಸರಿಯಾದ ಶಿಕ್ಷೆಯಾಗಿದೆ ಎಂದು ಜಸ್ಟೀಸ್ ಸಂತೋಷ್ ಹೆಗ್ಡೆ ಅವರು ಹೇಳಿದ್ದಾರೆ.
ದತ್ತಾಗೆ ಗೆಲುವಿನ ನಗೆ: ಬಳ್ಳಾರಿ ರೆಡ್ಡಿಗಳ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಮಾರು 2000ಕ್ಕೂ ಅಧಿಕ ಪುಟಗಳ ಮಾಹಿತಿ ಸಂಗ್ರಹಿಸಿ, ಹೋರಾಟ ನಡೆಸಿದ್ದ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಸಹಜವಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದ ಅನಂತಪುರದಲ್ಲಿರುವ ಓಬಳಾಪುರಂ ಮೈನಿಂಗ್ ಭೂ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಪಡೆದು ಕರ್ನಾಟಕದ ಗಡಿಭಾಗದಲ್ಲಿ ಅಕ್ರಮ ನಡೆಸಿರುವುದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ. ಕರ್ನಾಟಕ ಆಂಧ್ರ ಗಡಿಭಾಗದ ಕುರುಹಾಗಿದ್ದ ಸುಗಲಮ್ಮ ದೇಗುಲವನ್ನೇ ಕಬಳಿಸಿದರು. ಸುಮಾರು 15ಕಿ.ಮೀ ಉದ್ದದ ಕರ್ನಾಟಕದ ಗಡಿಭಾಗವನ್ನು ಆಂಧ್ರಕ್ಕೆ ಸೇರಿಸಿ ಗಡಿನಾಶ ಮಾಡಿದ್ದಾರೆ.
ಬಿಎಲ್ ಶಂಕರ್ ಸಂತಸ: ಇಡೀ ರಾಜ್ಯದಲ್ಲಿರುವ ಅಕ್ರಮದಲ್ಲಿರುವ ಭಾಗಿಯಲ್ಲಿರುವವರಿಗೆಲ್ಲ ಪಾಠವಾಗಲಿದೆ. ಉಪ್ಪು ತಿಂದವರು ನೀರು ಕುಡಿಯಬೇಕು. ಸುಪ್ರೀಂಕೋರ್ಟ್ ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಗಣಿಗಾರಿಕೆ ನಿಷೇಧಿಸುವುದು ಸ್ವಾಗತಾರ್ಹ. ಗಡಿ ನಾಶ, ಅರಣ್ಯ ನಾಶದ ಬಗ್ಗೆ ಜನ ಕೂಡಾ ಎಚ್ಚರವಹಿಸಿಕೊಳ್ಳಬೇಕು. ನಿರ್ಭೀತಿಯಿಂದ ಬಾಳುವಂಥ ವಾತಾವರಣ ಸೃಷ್ಟಿಗೆ ಇಂದು ಚಾಲನೆ ಸಿಕ್ಕಿದೆ ಎಂದು ಕಾಂಗ್ರೆಸ್ ಮುಖಂಡ ಬಿಎಲ್ ಶಂಕರ್ ಪ್ರತಿಕ್ರಿಯಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications