ಚಾಂಪಿಯನ್ಸ್ ಲೀಗ್ ಟಿ20ಯಲ್ಲೂ ಸಚಿನ್ ಡೌಟ್

ಸಚಿನ್ ಸಂಪೂರ್ಣವಾಗಿ ಗುಣಮುಖರಾಗಲು ವೈದ್ಯರು ನಾಲ್ಕು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಂಡದ ಮ್ಯಾನೇಜರ್ ಶಿವಲಾಲ್ ಯಾದವ್ ಹೇಳಿದ್ದಾರೆ. ಹೀಗಾಗಿ ಸೆ. 19ರಿಂದ ಆರಂಭವಾಗುವ ಚಾಂಪಿಯನ್ಸ್ ಲೀಗ್ ಟ್ವೆಂಟಿ 20 ಪಂದ್ಯಾವಳಿಯಿಂದ ಹೊರಗುಳಿಯಬೇಕಾಗಿದೆ. ಸಚಿನ್ ನೂರನೇ ಅಂತಾರಾಷ್ಟ್ರೀಯ ಶತಕಕ್ಕಾಗಿ ಅಭಿಮಾನಿಗಳು ಇನ್ನಷ್ಟು ಸಮಯ ಕಾಯಬೇಕಾಗಿದೆ.
ಗಾಯಾಳುಗಳ ತಂಡ : ಇಂಗ್ಲೆಂಡ್ ಪ್ರವಾಸ ನಿರತ ಟೀಂ ಇಂಡಿಯಾದ ಗಾಯಾಳುಗಳ ತಂಡ ಕಟ್ಟಿದರೆ ಸಚಿನ್ 8ನೇ ಆಟಗಾರರಾಗುತ್ತಾರೆ. ಸೆಹ್ವಾಗ್(ಭುಜ ನೋವು), ಯುವರಾಜ್(ಕೈ ನೋವು), ಹರ್ಭಜನ್(ಉದರ ಬೇನೆ), ಇಶಾಂತ್ಶರ್ಮಾ(ಸ್ನಾಯು ಸೆಳೆತ), ಜಹೀರ್ ಖಾನ್(ಸ್ನಾಯು ಸೆಳೆತ, ಕಾಲುನೋವು), ಗಂಭೀರ್ (ತಲೆ, ಕಣ್ಣು ನೋವು) ಮತ್ತು ರೋಹಿತ್ ಶರ್ಮ(ಕೈ ಬೆರಳು ಗಾಯ) ಜೊತೆ ಸಚಿನ್ ಸೇರಲಿದ್ದಾರೆ.
ಬದಲಿಗೆ ಆಟಗಾರರಿಗೆ ಚಾನ್ಸ್ : ರೋಹಿತ್ ಶರ್ಮ ಬದಲಿಗೆ ಮನೋಜ್ ತಿವಾರಿ ಹಾಗೂ ಸಚಿನ್ ಬದಲಿಗೆ ಎಸ್ ಬದರಿನಾಥ್ ಸ್ಥಾನ ಪಡೆದಿದ್ದಾರೆ.
2ನೇ ಏಕದಿನ ಪಂದ್ಯ ಮಂಗಳವಾರ ಸೌಂಥಾಪ್ಟನ್ ನಲ್ಲಿ ನಡೆಯಲಿದ್ದು, ಎರಡೂ ತಂಡಗಳ ನೆತ್ತಿ ಮೇಲೆ ಕಾರ್ಮೋಡ ಕವಿದಿದ್ದು, ಮಳೆರಾಯನೇ ಅಂಪೈರ್ ಆಗಲಿದ್ದಾನೆ. ತಂಡದಲ್ಲಿ ಅಲ್ಪಸ್ವಲ್ಪ ಬದಲಾವಣೆ ಕಾಣಬಹುದಾಗಿದೆ. [ವೇಳಾಪಟ್ಟಿ ನೋಡಿ]
ಭಾರತ ತಂಡದಲ್ಲಿ ವೇಗಿ ವಿನಯ್ ಕುಮಾರ್ ಬದಲಿಗೆ ಅರೋನ್ ಅಥವಾ ಸ್ಪಿನ್ನರ್ ಅಮಿತ್ ಮಿಶ್ರಾ ಸ್ಥಾನ ಪಡೆದರೆ ಅಚ್ಚರಿಯೇನಿಲ್ಲ. ಇಂಗ್ಲೆಂಡ್ ತಂಡದಲ್ಲಿ ಕೀಪರ್ ಹಾಗೂ ಆರಂಭಿಕ ಆಟಗಾರ ಕೀಸ್ವೆಟರ್ ಸ್ಥಾನಕ್ಕೆ ಕುತ್ತು ಬರಬಹುದು. ಸ್ವಾನ್ ಬದಲಿಗೆ ಸಮಿತ್ ಪಟೇಲ್ ಅನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications