ಕರ್ನಾಟಕದ ಅಕ್ರಮ ಗಣಿಗಾರಿಕೆ ಕೇಸ್ ಸಿಬಿಐಗೆ ವಹಿಸಲಿ
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಬಂಧನದ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಕುರಿತು ಸಮಗ್ರ ತನಿಖೆ ನಡೆಸಿ ದಾಖಲೆ ಸಮೇತ ವರದಿ ನೀಡಿದ್ದೇವೆ. ಜನಾರ್ದನ ರೆಡ್ಡಿ ಕುಟುಂಬ ಹಾಗೂ ಶ್ರೀರಾಮುಲು ಅವರು ಅಕ್ರಮ ವ್ಯವಹಾರದಲ್ಲಿ ತೊಡಗಿರುವುದನ್ನು ಸ್ಪಷ್ಟವಾಗಿ ವರದಿಯಲ್ಲಿ ದಾಖಲಿಸಲಾಗಿದೆ.
ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡರೆ ಇನ್ನಷ್ಟು ಅಪರಾಧಿಗಳನ್ನು ಸಾರ್ವಜನಿಕ ಮುಂದೆ ತರಬಹುದು ಎಂದು ಸಂತೋಷ್ ಹೆಗ್ಡೆ ಹೇಳಿದರು.
ಸಿಬಿಐಗೆ ಸಹಕಾರ: ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ಎರಡನೇ ವರದಿಯನ್ನು ಸಿಬಿಐ ನೀಡಲು ಕರ್ನಾಟಕ ಲೋಕಾಯುಕ್ತ ಸಿದ್ಧವಿದೆ. ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಕೆಲ ಮುಖ್ಯ ದಾಖಲೆಗಳನ್ನು ಕಳುಹಿಸಲಾಗಿದೆ. ಕರ್ನಾಟಕ ಸರ್ಕಾರ ಅಗತ್ಯ ದಾಖಲೆಗಳನ್ನು ಸಿಬಿಐಗೆ ರವಾನಿಸಬಹುದಾಗಿದೆ ಎಂದು ಲೋಕಾಯುಕ್ತ ಶಿವರಾಜ್ ವಿ ಪಾಟೀಲ್ ಹೇಳಿದ್ದಾರೆ.