ಬೆಂಗ್ಳೂರು ಪತ್ರಕರ್ತರಿಗೆ ಚೀಪ್ ಅಂಡ್ ಬೆಸ್ಟ್ ಲಂಚ್

42 ನೇ ವರ್ಷಕ್ಕೆ ಕಾಲಿಡುತ್ತಿರುವ ಕ್ಲಬ್ ತನ್ನ ಸದಸ್ಯರು ಮತ್ತು ದುಡಿಯುವ ಪತ್ರಕರ್ತರ ಅನುಕೂಲಕ್ಕಾಗಿ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ಬೆಳಗಿನಿಂದ ಮಧ್ಯರಾತ್ರಿಯವರೆಗೆ ದುಡಿಯುವ ಕ್ಲಬ್ಬಿನ ಸದಸ್ಯರು ಮತ್ತು ಪತ್ರಕರ್ತರಿಗೆ ಮಧ್ಯಾಹ್ನದ ಊಟ ಒದಗಿಸುವ ಯೋಜನೆ ಅದಾಗಿದೆ.
ಅತ್ಯುತ್ತಮ ರುಚಿ, ಶುಚಿಯಾದ ಭೋಜನ ನೀಡಲು ನಗರದ ಇಸ್ಕಾನ್ (ISKCON) ಸಂಸ್ಥೆ ಸಹಯೋಗದೊಂದಿಗೆ ಮಧ್ಯಾನ್ಹದ ಊಟದ ಯೋಜನೆ ಪ್ರೆಸ್ಕ್ಲಬ್ನಲ್ಲಿ ಸೆ. 5ರಿಂದ ಜಾರಿಗೆ ಬಂದಿದೆ. ಈ ಯೋಜನೆಯನ್ನು ಸಚಿವ ಆರ್ ಅಶೋಕ್ ಸೋಮವಾರ ಉದ್ಘಾಟಿಸಿದರು. ಕ್ಲಬ್ ಅಧ್ಯಕ್ಷ ಪೊನ್ನಪ್ಪ ಉಪಸ್ಥಿತರಿದ್ದರು.
ಅಪರಾಹ್ನ 1 ರಿಂದ 3 ಗಂಟೆಯವರೆಗೆ ಪತ್ರಕರ್ತರು, ಛಾಯಾಚಿತ್ರಕಾರರು ಮತ್ತು ಕ್ಲಬ್ ಸದಸ್ಯರಿಗೆ 10 ರೂ. ಬೆಲೆಯಲ್ಲಿ ಪುಷ್ಕಳ ಭೋಜನ ನೀಡುವ ಕಾರ್ಯಕ್ರಮ ಜಾರಿಯಾಗಿದ್ದು, ಮಾಧ್ಯಮ ಮಿತ್ರರು ಇದರ ಪ್ರಯೋಜನ ಪಡೆಯಬೇಕೆಂದು ಕಾರ್ಯದರ್ಶಿ ಸದಾಶಿವ ಶೆಣೈ ಮಂಗಳವಾರ ದಟ್ಸ್ ಕನ್ನಡಕ್ಕೆ ತಿಳಿಸಿದರು.
ಕ್ಲಬ್ ಸುತ್ತಮುತ್ತ ಬರೀ ತ್ರಿತಾರಾ, ಚತುರ್ತಾರಾ, ಪಂಚತಾರಾ ಹೋಟೆಲುಗಳೇ ಆವರಿಸಿಕೊಂಡಿದ್ದು ಕೈಗೆಟಕುವ ಬೆಲೆಯಲ್ಲಿ ಮಧ್ಯಾನ್ಹದ ಊಟ ಮಾಡುವುದು ತುಂಬಾ ತೊಂದರೆ ಆಗಿತ್ತು. ಈ ಕೊರತೆ ನಿವಾರಣೆ ಮಾಡುವುದೇ ಮಧ್ಯಾಹ್ನ ಪುಷ್ಕಳ ಭೋಜನ ಕಾರ್ಯಕ್ರಮದ ಉದ್ದಿಶ್ಯ ಎಂದು ಶೆಣೈ ವಿವರಿಸಿದರು.
ಓದುವ ಬರೆಯುವ ಪತ್ರಕರ್ತರಿಗೆ ಈ ಭೋಜನ 10 ರೂ. ಬೆಂಬಲ ಬೆಲೆಯಲ್ಲಿ ಲಭ್ಯವಾಗಿದ್ದು ಅದೂ ಫುಲ್ ಮೀಲ್ಸ್ ಆಗಿರುವುದರಿಂದ ದಿಲ್ ಖುಷ್ ಆಗಿದೆ ಎಂದು ಸೋಮವಾರ ಊಟ ಸವಿದ ಗೆಳೆಯರು ದಟ್ಸ್ ಕನ್ನಡ ವರದಿಗಾರರಿಗೆ ತಿಳಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications