ಆರ್ಕೆ ನಾರಾಯಣ್ ಜೀವಿಸಿದ ಮನೆ ನೆಲಸಮಕ್ಕೆ ತಡೆ

ಯಾದವಗಿರಿಯಲ್ಲಿರುವ ಈ ಮನೆಯ ಸ್ಥಳದಲ್ಲಿ ಬಹುಮಹಡಿ ಐಷಾರಾಮಿ ಕಟ್ಟಡ ನಿರ್ಮಾಣವಾಗಬೇಕಿತ್ತು. ಕಾಂಟ್ರಾಕ್ಟರ್ ಕಟ್ಟಡ ಒಡೆಯುವ ಕೆಲಸವನ್ನೂ ಆರಂಭಿಸಿದ್ದ. ಅಷ್ಟರಲ್ಲಿ ಸ್ಥಳವನ್ನು ಪರಿಶೀಲಿಸಿದ ಎಮ್ಸಿಸಿ ಜಂಟಿ ನಿರ್ದೇಶಕ ಚಂದ್ರೇಗೌಡ ಅವರು, ಕಟ್ಟಡ ನೆಲಸಮ ಮಾಡುವ ಕೆಲಸವನ್ನು ಕೂಡಲೆ ನಿಲ್ಲಿಸಬೇಕೆಂದು ಆದೇಶಿಸಿದ್ದಾರೆ.
"ಆರ್ಕೆ ನಾರಾಯಣ್ ಜೀವಿಸಿದ ಈ ಮನೆಯ ಜೊತೆ ಸಾರ್ವಜನಿಕರ ಭಾವನಾತ್ಮಕ ಸಂಬಂಧವಿದೆ. ಇಲ್ಲಿ ಸ್ಮಾರಕ ನಿರ್ಮಾಣವಾಗುತ್ತದಾ ಇಲ್ಲವಾ ಅದೂ ತಿಳಿಸಿಲ್ಲ. ಆದರೆ, ಖ್ಯಾತ ಸಾಹಿತಿ ಇದ್ದ ಜಾಗವನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನ ಮಾಡುತ್ತೇವೆ" ಎಂದು ಚಂದ್ರೇಗೌಡ ಅವರು ತಿಳಿಸಿದ್ದಾರೆ.
100x120 ಅಡಿ ಇರುವ ಈ ಸ್ಥಳ ಸಿಎಸ್ ಚಂದ್ರಶೇಖರ್, ಭುವನೇಶ್ವರಿ ಮತ್ತು ಶ್ರೀನಿವಾಸ ಎಂಬುವವರ ಹೆಸರಲ್ಲಿ ನೊಂದಾವಣಿಯಾಗಿದೆ. ಮನೆ ಒಡೆದು ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಕೂಡ ಕಾರ್ಪೊರೇಷನ್ ಅನುಮತಿಯನ್ನೂ ನೀಡಿತ್ತು. ಈಗ ಹೊಸ ಕಟ್ಟಡ ನಿರ್ಮಾಣದ ಲೈಸೆನ್ಸ್ ಅನ್ನು ರದ್ದುಪಡಿಸಲಾಗಿದೆ.
1990ರಲ್ಲಿ ಅನಾರೋಗ್ಯದ ಕಾರಣ ಚೆನ್ನೈಗೆ ಸ್ಥಳಾಂತರಗೊಳ್ಳುವ ಮೊದಲು ಆರ್ ಕೆ ನಾರಾಯಣ್ ಅವರು ಈ ಮನೆಯಲ್ಲಿ ಎರಡು ದಶಕಗಳ ಕಾಲ ಜೀವಿಸಿದ್ದರು. ಅನೇಕ ಜನರು ನಾರಾಯಣ್ ಅವರನ್ನು ಭೇಟಿ ಮಾಡಲು ಬಂದುಹೋಗಿ ಮಾಡುತ್ತಿದ್ದರು.
2006ರಲ್ಲಿ ನಾರಾಯಣ್ ಜನ್ಮಶತಾಬ್ದಿಯ ಸಂದರ್ಭದಲ್ಲಿ ಈ ಮನೆಯನ್ನು ಇದ್ದ ರೂಪದಲ್ಲೇ ಉಳಿಸಿಕೊಳ್ಳಬೇಕೆಂಬ ಬೇಡಿಕೆಯೂ ಎದ್ದಿತ್ತು. ಆದರೆ, ಸಂಬಂಧಪಟ್ಟವರು ಈ ಬೇಡಿಕೆಯನ್ನು ಕಿವಿಗೇ ಹಾಕಿಕೊಂಡಿರಲಿಲ್ಲ. ಮನೆಬಾಗಿಲು ಸೇರಿದಂತೆ ಕೆಲ ಭಾಗಗಳನ್ನು ಒಡೆದುಹಾಕಲಾಗಿದೆಯಾದರೂ ನೆಲಸಮ ಮಾಡಲು ತಡೆ ಒಡ್ಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications