ಜೈಲು ಶಿಕ್ಷೆಯಿಂದ ಪಾರಾದ ನಟ ಶ್ರೀನಿವಾಸಮೂರ್ತಿ

Actor Srinivas Murthy
ಬೆಂಗಳೂರು, ಸೆ. 7: ಹಿರಿಯ ನಟ ಶ್ರೀನಿವಾಸಮೂರ್ತಿ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದರಿಂದ ನಟ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇವರ ವಿರುದ್ದ ವಂಚನೆ ಆರೋಪದಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ವಿಧಿಸಿತ್ತು.

ಐದು ವರ್ಷದ ಕೆಳಗೆ ಶ್ರೀನಿವಾಸಮೂರ್ತಿ ಮೇಲೆ ಮುರಳಿಕೃಷ್ಣ ಎನ್ನುವವರು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿದ್ದರೆಂದು ಆರೋಪಿಸಿ ದೂರು ದಾಖಲಿಸಿದ್ದರು. ಶ್ರೀನಿವಾಸಮೂರ್ತಿ ಮತ್ತು ಇನ್ನೋರ್ವ ಆರೋಪಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಘನ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಏನಿದು ಕೇಸ್? : 1987ರಲ್ಲಿ ಬಿಡುಗಡೆಗೊಂಡಿದ್ದ 'ಬಾಳನೌಕೆ' ಸಿನಿಮಾ ವಿತರಣೆಗೆ ಸಂಬಂಧಿಸಿದಂತೆ ಶ್ರೀನಿವಾಸಮೂರ್ತಿ ಐದು ಲಕ್ಷ ಮೊತ್ತಕ್ಕೆ ಪದ್ಮಶ್ರೀ ಕಂಬೈನ್ಸ್ ಸಂಸ್ಥೆಯೊಂದಿದೆ ಒಪ್ಪಂದ ಮಾಡಿಕೊಂಡಿದ್ದರು. ಈ ಸಂಬಂಧ 2,13,000 ಹಣ ವಾಪಸ್ ಮಾಡಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿದ್ದರು ಎಂದು ಮುರಳಿಕೃಷ್ಣ ಎನ್ನುವವರು ದೂರು ನೀಡಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್ ಶ್ರೀನಿವಾಸಮೂರ್ತಿ ಮತ್ತು ಇನ್ನೊಬ್ಬ ಆರೋಪಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಇಬ್ಬರು ಮೇಲ್ಮನವಿ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+