ಜನಾರ್ದನ ರೆಡ್ಡಿ ಬಂಗಾರವನ್ನು ಅಡಗಿಸಿಟ್ಟಿದ್ದೆಲ್ಲಿ ಗೊತ್ತೆ?

ಅಧಿಕೃತ ಮೂಲಗಳ ಪ್ರಕಾರ, ಸಿಬಿಐ ಅಧಿಕಾರಿಗಳು ರೆಡ್ಡಿಯ ಮನೆಯ ನೆಲಮಾಳಿಗೆಯಲ್ಲಿ ಅಪಾರ ಪ್ರಮಾಣದ ಬಂಗಾರ, ನಗದು ಹಣ ಹಾಗೂ ಇನ್ನಿತರೆ ಮಾಹಿತಿಗಳನ್ನು ಅಡಗಿಸಿ ಇಡಲಾಗಿದೆ ಎನ್ನುವ ಮಾಹಿತಿಯನ್ನು ಆಧರಿಸಿ ಮಂಗಳವಾರ ನಡೆಸಿದ ಶೋಧ ಯಾವುದೇ ಫಲವನ್ನು ನೀಡಿರಲಿಲ್ಲ. ಆದ್ದರಿಂದ ಬುಧವಾರಕ್ಕೆ ಮೆಟಲ್ ಡಿಟೆಕ್ಟರ್ ಮೂಲಕವೇ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಐಷಾರಾಮಿ ಬದುಕನ್ನು ಅತಿಯಾಗಿ ಪ್ರೀತಿಸುತ್ತಿದ್ದ ಮತ್ತು ಸಕಲೈಶ್ವರ್ಯಗನ್ನು ಅನುಭವಿಸಿದ ಜನಾರ್ದನ ರೆಡ್ಡಿ, ವಾಸವಿರುವ ಮನೆಯಲ್ಲಿ ನೆಲಮಾಳಿಗೆ ಸಾಮಾನ್ಯರ ಕಣ್ಣಿಗೆ ಕಾಣುತ್ತಿಲ್ಲ. ಆದರೂ ಸಿಬಿಐ ಅಧಿಕಾರಿಗಳು ತಮಗೆ ದೊರೆತ ಮಾಹಿತಿಯನ್ನು ಆಧರಿಸಿ ತನಿಖೆಯನ್ನು ನಡೆಸಿ ಬಂಗಾರದ ಶೋಧ ನಡೆಸಿದ್ದರು. [ಮುಂದೆ ಓದಿ : ಬಂಗಾರದ ಮಾಹಿತಿ ತಿಳಿದು ದಂಗಾದ ಪೊಲೀಸರು]












Click it and Unblock the Notifications