ಲೋಹ ಪತ್ತೆ ಸಾಧನದಿಂದ ಬಂಗಾರದ ಶೋಧನೆ

ಬುಧವಾರ ಮಧ್ಯಾಹ್ನದ ವೇಳೆಗೆ ಈ ಮಾಹಿತಿ ಖಚಿತವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಆದಾಯ ತೆರಿಗೆ ಅಧಿಕಾರಿಗಳನ್ನು ಕರೆಯಿಸಿ ಅವರ ಸಮ್ಮುಖದಲ್ಲೇ ಬಂಗಾರವನ್ನು ಹೊರ ತೆಗೆಯಲು ಮುಂದಾದರು. ಆಗ, ಒಟ್ಟು ಕನಿಷ್ಟ 30 ಕೆಜಿ ಬಂಗಾರ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿದೆ ಎಂದು ಮೂಲಗಳು ಖಚಿತಪಡಿಸಿವೆ.
ವಿದೇಶಿ ವಸ್ತುಗಳ ಮೂಲಕವೇ ಜನಾರ್ದನರೆಡ್ಡಿ ಅವರ ಸ್ನಾನಗೃಹ ಮತ್ತು ಶೌಚಾಲಯ ನಿರ್ಮಾಣವಾಗಿದ್ದು ಇವುಗಳ ಒಟ್ಟು ವೆಚ್ಚವೇ ಕೆಲ ಕೋಟಿಗಳನ್ನು ಮೀರಿಸುವಂಥಹದ್ದು. ಕುಟುಂಬದ ಸದಸ್ಯರು ಮತ್ತು ಮನೆಯ ವಿಶ್ವಾಸಾರ್ಹ - ನಂಬಿಕೆಸ್ಥ ನೌಕರರು ಮಾತ್ರ ಈ ಕೋಣೆಗಳ ಪ್ರವೇಶಕ್ಕೆ ಅರ್ಹರು.
ಸಿಬಿಐ ಅಧಿಕಾರಿಗಳ ಶೋಧ ಕಾರ್ಯ ಬುಧವಾರ ರಾತ್ರಿ 8 ಗಂಟೆ ನಂತರವೂ ಮುಂದುವರೆದಿದೆ. ಸಿಬಿಐ ತಂಡದ ಜೊತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇದ್ದು ಸಿಕ್ಕ ಬಂಗಾರದ ಮೌಲ್ಯ ನಿಗದಿ ಮಾಡುವ, ಆದಾಯ ತೆರಿಗೆ ಪಾವತಿಸುವ ಪಟ್ಟಿಯಲ್ಲಿ ಸಿಕ್ಕಿರುವ ಬಂಗಾರಕ್ಕೆ ತೆರಿಗೆ ಪಾವತಿ ಆಗಿರುವ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ರೆಡ್ಡಿ ಪತ್ನಿಯ ಬಂಧನ? : ಜನಾರ್ದನರೆಡ್ಡಿಯ ಪತ್ನಿ ಲಕ್ಷ್ಮಿ ಅರುಣ ಅವರನ್ನು ಸಿಬಿಐ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಬಂಧಿಸಿ, ಹೈದರಾಬಾದ್ನ ಸಿಬಿಐ ಕೋರ್ಟ್ಗೆ ಒಪ್ಪಿಸಲಿದ್ದಾರೆ ಎನ್ನುವ ದಟ್ಟವಾದ ವದಂತಿಗಳು ಇರುವ ಹಿನ್ನೆಲೆಯಲ್ಲಿ ರೆಡ್ಡಿಯ ಮನೆಯ ಮುಂದೆ ಮಾಧ್ಯಮ ಪ್ರತಿನಿಧಿಗಳು ಬುಧವಾರ ಬೆಳಗ್ಗೆಯಿಂದಲೇ ಕಾದು ಕುಳಿತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications